May 18, 2024

MALNAD TV

HEART OF COFFEE CITY

ಅ.16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿ – ಬಿಲ್ಲವ ಸಂಘದ 25 ನೇ ವಾರ್ಷಿಕ ಮಹಾಸಭೆ

1 min read

ಚಿಕ್ಕಮಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿ ಹಾಗೂ ಬಿಲ್ಲವ ಸಂಘದ 25 ನೇ ವಾರ್ಷಿಕ ಮಹಾಸಭೆಯ ಕಾರ್ಯಕ್ರಮವನ್ನು ಅ.16 ರಂದು ಶಿರವಾಸೆ ಗ್ರಾಮದಲ್ಲಿರುವ ಬಿಲ್ಲವ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿರವಾಸೆ ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ವಾಸು ಪೂಜಾರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿ ಹಾಗೂ ಬಿಲ್ಲವ ಸಂಘದ 25 ನೇ ವಾರ್ಷಿಕ ಮಹಾಸಭೆಯ ಕಾರ್ಯಕ್ರಮವನ್ನು ಅ.16 ರಂದು ಶಿರವಾಸೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ಅಧ್ಯಕ್ಷ ಹೆಚ್.ಎಂ.ಸತೀಶ್ ನಡೆಸಿಕೊಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶಿರವಾಸ ಬಿಲ್ಲವ ಸಂಘದ ಅಧ್ಯಕ್ಷ ಯು. ಸಂಜೀವ ಅಮೀನ್ ವಹಿಸಲಿದ್ದಾರೆ. ಜಿಲ್ಲಾ ಒಕ್ಕೂಟದ ಗೌರವಾಧ್ಯಕ್ಷ ಪಿ.ಆರ್. ಸದಾಶಿವ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಅನಾವರಣಗೊಳಿಸಲಿದ್ದಾರೆ ಎಂದರು.
ಜಿಲ್ಲಾ ಒಕ್ಕೂಟದ ಕಾರ್ಯಾಧ್ಯಕ್ಷ ಕೆ. ಶಾಂತಕುಮಾ‌ರ್ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪ್ರಪ್ರಾರ್ಚನೆ ಮಾಡಲಿದ್ದು, ಶಿಶು ಅಭಿವೃದ್ಧಿ ಮಂಡಳಿ ಅಧಿಕಾರಿ ಟಿ.ಎಲ್.ಉಮೇಶ್ ಅವರು  ಶ್ರೀ ನಾರಾಯಣಗುರುಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಮತ್ತು ಈ ಸಮಾರಂಭದಲ್ಲಿ ಕೇಂದ್ರೀಯ ಕಾಫಿ ಮಂಡಳಿಯ ಸದಸ್ಯರಾದ ಬಿ.ಎಸ್ ಭಾಸ್ಕರ್ ಮೊಲ್ಲಾ ಇವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಈ ಸಮಾರಂಭದಲ್ಲಿ ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ಕೆ.ಸಿ. ಗುಣಶೇಖರ್, ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ್ ಜಿಲ್ಲಾ ನಾರಾಯಣ ಗುರು ಸಮಿತಿಯ ಅಧ್ಯಕ್ಷ ಎಂ. ಕೃಷ್ಣಪ್ಪ, ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆರ್ಯ ಈಡಿಗ ಸಂಘ, ಬಿಲ್ಲವ ಸಂಘ, ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘಗಳ ಅಧ್ಯಕ್ಷರುಗಳು, ಮಾಜಿ ಅಧ್ಯಕ್ಷರುಗಳು, ಹೋಬಳಿ ಸಂಘಗಳ ಅಧ್ಯಕ್ಷರುಗಳು, ಗ್ರಾಮ ಸಂಘಗಳ ಅಧ್ಯಕ್ಷರುಗಳು ಸೇರಿದಂತೆ ಜಿಲ್ಲೆಯ ಸಮಾಜದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!