April 27, 2024

MALNAD TV

HEART OF COFFEE CITY

ಹಳಸಿದ ಬಿರಿಯಾನಿ ತಿಂದು 17 ಜನ ಅಸ್ವಸ್ಥ : ಮಕ್ಕಳು ಸೇರಿದಂತೆ ಎಲ್ಲರೂ ಆಸ್ಪತ್ರೆಗೆ ದಾಖಲು

1 min read

 

ಬಿರಿಯಾನಿ ತಿಂದು ಅಸ್ವಸ್ಥಗೊಂಡ 17 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.

ತಯಾರಿಸಿ ಒಂದು ದಿನವಾಗಿದ್ದ ಬಿರಿಯಾನಿಯನ್ನ ತಿಂದಿದ್ದು ಏಕಾಏಕಿ ಗ್ರಾಮಸ್ಥರು ಅಸ್ವಸ್ಥರಾಗಿದ್ದು ಬಿರಿಯಾನಿ ಸೇವಿಸಿದವರಲ್ಲಿ 17 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಕಡೂರು ತಾಲೂಕಿನ ಮರವಂಜಿ ಗ್ರಾಮದ

ಮನೆಯಲ್ಲಿನ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು, ಆದರೆ ಬಿರಿಯಾನಿಯನ್ನು ತಿಂದ ಕೂಡಲೇ ವಾಂತಿ ಭೇದಿ ಆರಂಭಗೊಂಡಿದೆ

ಅಸ್ವಸ್ಥಗೊಂಡವರನ್ನ ಕಡೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಪುಟ್ಟ ಮಕ್ಕಳು ಸೇರಿದಂತೆ 17 ಜನ ಅಸ್ವಸ್ಥಗೊಂಡು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ, 

 

 

ಆಸ್ಪತ್ರೆಗೆ ಕಡೂರು ಶಾಸಕ ಕೆ.ಎಸ್.ಆನಂದ್ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ

ವೈದ್ಯಾದಿಕಾರಿಗಳು ಬಿರಿಯಾನಿ ಹಳಸಿದ್ದರಿಂದ ಘಟನೆ ನಡೆದಿರಬಹುದು ಎಂದಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!