ರಂಗೇರಿದ 17 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
1 min readತರೀಕೆರೆ : 17 ನೇ ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಅದ್ದೂರಿಯಾಗಿ ನಡೆಯಿತು. ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಿರ್ಮಣಗೊಂಡಿದ್ದ ಹೆಚ್. ಚಂದ್ರಪ್ಪ ವೇದಿಕೆಯಲ್ಲಿ ಕನ್ನಡ ನುಡಿ ಕಾರ್ಯಕ್ರಮ ನಡೆಯಿತು. ವೇದಿಕೆ ಕಾರ್ಯಕ್ರಮಕ್ಕು ಮೊದಲು ಸಮ್ಮೇಳನದ ಸರ್ವಾಧ್ಯಕ್ಷ ಎನ್ ರಾಜು ಹಾಗೂ ಶುಭ ದಂಪತಿಗಳನ್ನು ಸಾರೋಟು ಮೆರವಣಿಗೆಯಲ್ಲಿ ಪಟ್ಟಣದ ಸಾಲುಮರದಮ್ಮ ದೇವಸ್ಥಾನದಿಂದ ವೇದಿಕೆವರೆಗೆ ಸಾಗಿ ಬಂತು. ತಾಲೂಕಿನ ಹಿರಿಯ-ಕಿರಿಯ ಸಾಹಿತಿಗಳು, ಕನ್ನಾಡಾಭಿಮಾನಿಗಳು ಸಮ್ಮೇಳನದಲ್ಲಿ ಪಾಲ್ಗೋಂಡಿದ್ದರು. ಎಲ್ಲೆಡೆ ಕನ್ನಡದ ಭಾವುಟ ರಾರಾಜಿಸುತ್ತಿತ್ತು. ತಾಲೂಕು ಕನ್ನಡ ಸಾಹಿತ್ಯ ಅಧ್ಯಕ್ಷ ಸುರೇಶ್ ಚಂದ್ರ, ತರೀಕೆರೆ ಶಾಸಕ ಸುರೇಶ್, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿವಿಧ ಗೋಷ್ಠಿಗಳನ್ನು ಸಹ ಹಮ್ಮಿಕೊಳ್ಳಲಾಗಿತ್ತು. ತರೀಕೆರೆ ನೀರಾವರಿ ಸಮಸ್ಯೆಯ ಬಗ್ಗೆ ಗಂಭೀರವಾಗಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವ ಹಿಂಗಿತವನ್ನು ಸಮ್ಮೇಳನಾಧ್ಯಕ್ಷ ಎನ್. ರಾಜು ವ್ಯಕ್ತಪಡಿಸಿದರು. ಸಮೇಳನದ ಯಶಸ್ವಿಗೊಳಿಸಲು ಸಹಕರಿಸಿದ ಸರ್ವರಿಗೂ ತರೀಕೆರೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ್ ಚಂದ್ರ ಧನ್ಯವಾದ ಅರ್ಪಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g