May 6, 2024

MALNAD TV

HEART OF COFFEE CITY

ಶ್ರೀರಾಮ ಸೇನೆಯಿಂದ ನ.8 ರಿಂದ 14ರವರೆಗೆ 17ನೇ ವರ್ಷದ ದತ್ತಮಾಲಾ

1 min read

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ನ.8 ರಿಂದ 14ರವರೆಗೆ 17ನೇ ವರ್ಷದ ದತ್ತಮಾಲಾ ಅಭಿಯಾನ ನಡೆಯಲಿದೆ ಎಂದು ಶ್ರೀರಾಮ ಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲ ಕರ್ಣಿ ತಿಳಿಸಿದರು.ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ದತ್ತಮಾಲಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನ.8ರಂದು ನಗರದ ಶಂಕರ ಮಠದಲ್ಲಿ ಬೆಳಿಗ್ಗೆ 10ಗಂಟೆಗೆ ಮಾಲಾಧಾರಣ ಕಾರ್ಯಕ್ರಮ ನಡೆಯಲಿದೆ. ನ.11 ರಂದು ದತ್ತ ದೀಪೋತ್ಸವ, ನ.12ರಂದು ಪಡಿ ಸಂಗ್ರಹ, ನ.14ರಂದು ದತ್ತಪೀಠದಲ್ಲಿ ಧರ್ಮಸಭೆ ಮತ್ತು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದರು.

2019 ಶೋಭಾಯಾತ್ರೆ ಸಂದರ್ಭದಲ್ಲಿ ದತ್ತಮೂರ್ತಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದ್ದು, ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ ಈ ಬಾರಿಯಿಂದ ಶೋಭಾಯಾತ್ರೆಯನ್ನು ರದ್ದುಪಡಿ ಸಲಾಗಿದೆ. ಜಿಲ್ಲಾಡಳಿತದ ಕೆಟ್ಟದಾಗಿ ನಡೆಸಿಕೊಂಡಿದ್ದು ಈ ಸಂದೇಶ ಇಡೀ ರಾಜ್ಯಕ್ಕೆ ರವಾನೆ ಯಾಗಬೇಕು. ಈ ಹಿನ್ನೆಲೆಯಲ್ಲಿ ಶೋಭಾಯಾತ್ರೆ ಮಾಡದಿರಲು ಶ್ರೀರಾಮ ಸೇನೆ ನಿರ್ಧರಿಸಿದೆ ಎಂದು ತಿಳಿಸಿದರು.

ಗುಹೆಯೊಳಗೆ ಸ್ವಾಮೀಜಿಗಳು ಪ್ರವೇಶಿಸಿ ಪೂಜೆ ಸಲ್ಲಿಸಲು ಇದುವರೆಗೂ ಯಾವುದೇ ನಿರ್ಬಂಧವಿರಲಿಲ್ಲ, ಹೈಕೋರ್ಟ್ ತೀರ್ಪು ಬಂದ ಬಳಿಕ ಗುಹೆಯೊಳಗೆ ಸ್ವಾಮೀಜಿಗಳು ಪ್ರ ವೇಶಿಸಲು ಜಿಲ್ಲಾಡಳಿತದಿಂದ ಅನುಮತಿ ಪಡೆದುಕೊಳ್ಳಬೇಕೆಂದು ಹೇಳುತ್ತಿದ್ದಾರೆ. ಈ ಹಿಂ ದೇ ಇಲ್ಲದ ನಿರ್ಬಂಧ ಈಗ್ಯಾಕೆ ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಇತ್ತೀಚೆಗೆ ಗುಹೆ ಪ್ರದೇಶದಲ್ಲೇ ಪ್ರತಿಭಟನೆ ನಡೆಸಿದ್ದೇವು. ದತ್ತಮಾಲೆ ಸಂದರ್ಭದಲ್ಲಿ ಸ್ವಾಮೀಜಿಯವರ ಗುಹೆ ಪ್ರವೇಶಕ್ಕೆ ಜಿಲ್ಲಾಡಳಿತದಿಂದ ಅನುಮತಿ ಪಡೆಯಲು ವಿನಂತಿಸುವುದಿಲ್ಲ ಎಂದು ಹೇಳಿದರು.

ಶ್ರೀ ದತ್ತಾತ್ರೇಯ ಬಾಬಾಬುಡನ್ ದರ್ಗಾ ವಿಚಾರ ರಾಜ್ಯಸರ್ಕಾರ ನಿರ್ಣಾಯ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಸರ್ಕಾರ ಆಕ್ಷೇಪಣೆ ಸಲ್ಲಿಸಲು ಸಮಿತಿ ರಚಿಸಿ ರುವುದು ಖಂಡನೀಯ. ರಾಜ್ಯಸರ್ಕಾರ ಕೋರ್ಟ್ ಆದೇಶದಂತೆ ಶೀಘ್ರವೇ ನಿರ್ಣಾಯ ಕೈ ಗೊಂಡು ಹಿಂದೂ ಅರ್ಚಕರನ್ನು ನೇಮಿಸಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ಜಿಲ್ಲಾಧ್ಯಕ್ಷ ರಂಜಿತ್‌ಶೆಟ್ಟಿ, ತಾಲ್ಲೂಕು ಅಧ್ಯಕ್ಷ ಪುನೀತ್, ತಾಲ್ಲೂಕು ಪ್ರಮುಖ್ ಜ್ಞಾನೇಂದ್ರ, ಶೃಂಗೇರಿ ವಿಭಾಗದ ಪ್ರಮುಖ್ ಅರ್ಜುನ್, ದುರ್ಗಾಸೇನೆ ಜಿಲ್ಲಾಧ್ಯಕ್ಷೆ ಶಾರದ ಇದ್ದರು.
‘ಶ್ರೀರಾಮ ಸೇನೆ ಶಿವಮೊಗ್ಗ ವಿಭಾಗೀಯ ಕಾರ್ಯಾಧ್ಯಕ್ಷರಾಗಿ ಶೃಂಗೇರಿ ತಾಲ್ಲೂಕಿನ ಅರ್ಜು ನ್ ನೇಮಕ ಮಾಡಲಾಗಿದೆ. ಹಾಗೇ ತಾಲ್ಲೂಕು ದುರ್ಗಾಸೇನೆ ಅಧ್ಯಕ್ಷೆಯಾಗಿ ನವೀನಾ ಅವ ರನ್ನು ಆಯ್ಕೆ ಮಾಡಲಾಗಿದೆ ಎಂದು ಗಂಗಾಧರ್ ಕುಲಕರ್ಣಿ ತಿಳಿಸಿದರು.’

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!