May 5, 2024

MALNAD TV

HEART OF COFFEE CITY

2017ರ ಗೋರಿ ಹಾನಿ ಪ್ರಕರಣ: 14 ಹಿಂದು ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್

1 min read

ಚಿಕ್ಕಮಗಳೂರು: 2017 ರಲ್ಲಿ ಹಿಂದು ಸಂಘಟನೆ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ದತ್ತಪೀಠ ಆವರಣದ ಗೋರಿ ಹಾನಿ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಎಲ್ಲಾ 14 ಜನ ಆರೋಪಿಗಳಿಗೆ ಪೊಲೀಸರು ಸಮನ್ಸ್ ನೀಡಿದ್ದಾರೆ.

2017 ರ ದತ್ತಜಯಂತಿ ವೇಳೆ ದತ್ತಭಕ್ತರ ಮೇಲೆ ದಾಖಲಾಗಿದ್ದ ಗೋರಿ ಹಾನಿ ಪ್ರಕರಣದಲ್ಲಿ ಕಳೆದ ಡಿಸೆಂಬರ್ 6 ರಂದು ನ್ಯಾಯಾಲಯಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು , ಪ್ರಕರಣದ ಎಲ್ಲಾ 14 ಜನ ಆರೋಪಿತರಿಗೆ ಕೋರ್ಟ್ ಸಮನ್ಸ್ ನೀಡಿದೆ. ಕಳೆದ 6 ವರ್ಷಗಳ ಹಿಂದೆ ದಾಖಲಾಗಿದ್ದ ಕೇಸ್ ಗೆ ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಚಾರ್ಜ್ ಶೀಟ್ ಸಲ್ಲಿಕೆಗೆ ಅನುಮತಿ ನೀಡಿತ್ತು. ಇದೀಗ 14 ಜನರ ಮೇಲಿನ ಕೇಸ್ ನ ಆರೋಪಿಗಳಾದ ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್ ರಾಮುಗೆ ಪೊಲೀಸರು ಸಮನ್ಸ್ ನೀಡಿದ್ದು , ಎಲ್ಲಾ ಆರೋಪಿಗಳಿಗೂ ಇದೇ ಜನವರಿ 8 ನೇ ತಾರೀಖು ಕೋರ್ಟಿಗೆ ಹಾಜರಾಗುವಂತೆ ಸೂಚನೆ ಸಹಾ ನೀಡಲಾಗಿದೆ.

ಕೋರ್ಟ್ ಸಮನ್ಸ್ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಮ್ ಅಮಟೆ ಸ್ಪಷ್ಟನೆ ನೀಡಿದ್ದು ಜಿಲ್ಲೆಯಲ್ಲಿ ಯಾವುದೇ ಹಳೇ ಪ್ರಕರಣಗಳ ರೀ ಒಪನ್ ಆಗಿಲ್ಲ , ಕೆಲ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!