ಜಿಲ್ಲೆಯಲ್ಲಿ 21 ಕನ್ನಡ ಶಾಲೆಗಳು ಬಂದ್.. ಸರ್ಕಾರದ ಫ್ರೀ ಅಕ್ಕಿ, ಬಸ್ಸು, ಕರೆಂಟ್, ದುಡ್ಡು ಎಲ್ಲಾ ಬೇಕು.. ಆದ್ರೆ, ಸರ್ಕಾರಿ ಶಾಲೆ ಮಾತ್ರ ಯಾಕೆ ಬೇಡ..?
1 min readಚಿಕ್ಕಮಗಳೂರು : ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಓದ್ಬೇಕು ಅನ್ನೋ ಪೋಷಕರ ಬಯಕೆಯೋ ಇಲ್ಲ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡೋದಕ್ಕೆ ಆಗ್ತಿಲ್ವೋ ಅಥವ ಸರ್ಕಾರ ಕೇಳ್ದೋರ್ಗೆಲ್ಲಾ ಖಾಸಗಿ ಶಾಲೆಗೆ ಅನುಮತಿ ನೀಡ್ತಿರೋದ್ರಿಂದ್ಲೋ ಏನೋ. 2023ರ ಈ ಒಂದೇ ವರ್ಷದಲ್ಲಿ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 21 ಕನ್ನಡ ಶಾಲೆಗಳು ಬಂದ್ ಆಗಿವೆ. ಸರ್ಕಾರ ಮಧ್ಯಾಹ್ನ ಬಿಸಿಯೂಟ, ಮೊಟ್ಟೆ-ಹಾಲು, ಶೂ-ಸಾಕ್ಸ್ ಅಂತೆಲ್ಲಾ ಹತ್ತಾರು ಯೋಜನೆಗಳನ್ನ ಜಾರಿಗೆ ತಂದ್ರು ಹೆತ್ತವರು ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರ್ಸೋಕೆ ಮೂಗು ಮುರಿಯುತ್ತಿದ್ದಾರೆ. ಇದರಿಂದ ಕಾಫಿನಾಡಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳ್ತಿರೋ ಪ್ರಮಾಣ ಕೂಡ ಹೆಚ್ಚಿದೆ. ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡ್ತಿರೋದ್ರಿಂದಲೇ ಸರ್ಕಾರಿ ಶಾಲೆಗಳಿಗೆ ಈ ಸ್ಥಿತಿ ಬಂದಿದೆ ಅಂತ ಸ್ಥಳಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.
ಜನರಿಗೆ ಸರ್ಕಾರದ ಎಲ್ಲಾ ಸೌಲಭ್ಯ ಬೇಕು. ಅಕ್ಕಿ, ಬಸ್ಸು, ಕರೆಂಟ್, ದುಡ್ಡು ಎಲ್ಲಾ ಬೇಕು. ಆದ್ರೆ, ಸರ್ಕಾರಿ ಶಾಲೆ ಮಾತ್ರ ಬೇಡ. ಖಾಸಗಿ ಹಾಗೂ ಇಂಗ್ಲೀಷ್ ಮೀಡಿಯಂನಲ್ಲಿ ಮಕ್ಕಳು ಓದುತ್ತಿದ್ದಾರೆ ಅಂದ್ರೆ ಹೆತ್ತವರಿಗೆ ಡಿಗ್ನಿಟಿ. ಪೋಷಕರು ತಮ್ಮ ಡಿಗ್ನಿಟಿಗಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿಸ್ತಿದ್ದಾರೆ ಎಂದು ಸ್ಥಳೀಯರು ಪೋಷಕರು ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ. ಸರ್ಕಾರ ಸರ್ಕಾರಿ ಶಾಲೆಗಳನ್ನ ಉಳಿಸೋಕೆ ನಾನಾ ಯೋಜನೆಗಳನ್ನ ಜಾರಿಗೆ ತಂದು ಪ್ರಯತ್ನಪಟ್ಟರೂ ಪೋಷಕರು ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸ್ತಿಲ್ಲ. ಜೊತೆಗೆ ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡ್ತಿರೋದ್ರಿಂದ ಸರ್ಕಾರಿ ಶಾಲೆಗಳು ಅವನತಿಯ ಅಂಚಿನಲ್ಲಿವೆ. ಕಳೆದ ಐದಾರು ವರ್ಷದಲ್ಲಿ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಶಾಶ್ವತ ಬೀಗ ಬಿದ್ದಿದೆ. ನೂರಾರು ಮಕ್ಕಳಿಗೆ ವಿದ್ಯಾಧಾನ ಮಾಡಿದ ಸರ್ಕಾರಿ ಶಾಲೆಗಳಿಂದು ಲೂಟಿಯೊಡೆದ ಕೋಟೆಯಂತಾಗಿದೆ. ಸರ್ಕಾರ ಕನ್ನಡ ಶಾಲೆಗಳಿಗೆ ನಾನಾ ಸೌಲಭ್ಯ ನೀಡ್ತಿದೆ. ಆದ್ರೆ, ಅದರ ಬೆನ್ನಲ್ಲೇ ಖಾಸಗಿ ಶಾಲೆಗಳಿಗೆ ಎಗ್ಗಿಲ್ಲದೆ ಅನುಮತಿ ನೀಡ್ತಿರೋದ್ರಿಂದ ಪೋಷಕರಿಗೆ ಇಂಗ್ಲಿಷ್ ಮೇಲಿರೋ ವ್ಯಾಮೋಹದಿಂದ ಮಕ್ಕಳನ್ನ ಖಾಸಗಿ ಶಾಲೆಗಳಿಗೆ ಸೇರಿಸ್ತಿದ್ದಾರೆ. ಈ ಮಧ್ಯೆ ವಸತಿ ಶಾಲೆಗಳ ಆರಂಭ ಕೂಡ ಸರ್ಕಾರಿ ಶಾಲೆಗೆ ಮರಣಶಾಸನ ಬರೆದಿದೆ.
ತಾಲೂಕುವಾರು ವಿವರ :
ಚಿಕ್ಕಮಗಳೂರು ತಾಲೂಕು : 5
ಕಡೂರು : 4
ತರೀಕೆರೆ : 2
ಮೂಡಿಗೆರೆ : 2
ಎನ್.ಆರ್.ಪುರ : 2
ಕೊಪ್ಪ : 2
ಶೃಂಗೇರಿ : 4
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g