ಗಣರಾಜ್ಯೋತ್ಸವದಂದು ಪ್ರತಿಭಟನೆ ಅಲ್ಲ : ರಾಷ್ಟ್ರಧ್ವಜ ಹಿಡಿದು ರೈತರ ಸಂಭ್ರಮ : ಕೋಡಿಹಳ್ಳಿ
1 min readಚಿಕ್ಕಮಗಳೂರು : ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ನಡೆಯುವ ರೈತರ ಬೃಹತ್ ಟ್ರ್ಯಾಕ್ಟರ್ ಮೆರವಣಿಗೆ ಪ್ರತಿಭಟನೆ ಅಲ್ಲ, ಬದಲಾಗಿ ಅನ್ನದಾತರು ಮಾಡುವ ರಿಪಬ್ಲಿಕ್ ಡೇ ಸಂಭ್ರಮ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿ ಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಚಿಕ್ಕಮಗಳೂರಿನ ಪ್ರೆಸ್ಕ್ಲಬ್ ನಲ್ಲಿ ಮಾತನಾಡಿದ ಅವರು ನಾವು ಯಾವುದೇ ಕಾರ್ಯಕ್ರಮಕ್ಕೆ ಅಡ್ಡಿಪಡಿಸುತ್ತಿಲ್ಲ. ಗಣರಾಜ್ಯ ಪೆರೇಡ್ ಅಥವಾ ಧ್ವಜಾರೋಹಣಕ್ಕೆ ನಾವು ತೆರಳುತ್ತಿಲ್ಲ. ಕಾರ್ಯಕ್ರಮದ ನಂತರ ರಾಷ್ಟ್ರಧ್ವಜ ಹಿಡಿದು ರೈತರ ಕೃಷಿ ಸಂಬಂಧಿ ವಾಹನಗಳಲ್ಲಿ ರ್ಯಾಲಿ ನಡೆಸುತ್ತೇವೆ ಎಂದು ಕೋಡಿಹಳ್ಳಿ ಹೇಳಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಹತ್ತು ಸಾವಿರಕ್ಕೂ ಹೆಚ್ಚು ವಾಹನಗಳು ಬರಲಿದ್ದು, ಚಿಕ್ಕಮಗಳೂರು ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ಅನ್ನದಾತರು ತೆರಳಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪ ಗೌಡ ಹೇಳಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g