ನವೋದಯ ಶಾಲೆಯ 62 ಮಂದಿಗೆ ಕೊರೊನಾ ಸೋಂಕು, 15 ಆರೋಗ್ಯ ಸಿಬ್ಬಂದಿ ನೇಮಕ
1 min readಚಿಕ್ಕಮಗಳೂರು: ಜಿಲ್ಲೆಯಲ್ಲಿ ಅನೇಕ ದಿನಗಳಿಂದ ಕ್ಷೀಣಿಸಿದ್ದ ಕೋವಿಡ್ ಸೋಂಕು ಮತ್ತೇ ಸ್ಫೋಟಗೊಂಡಿದ್ದು, ಒಂದೇ ದಿನ ನರಸಿಂಹರಾಜಪುರ ತಾಲ್ಲೂಕು ಬಾಳೆಹೊನ್ನೂರು ನವೋದಯ ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿ ದ್ದು ಜನತೆಯಲ್ಲಿ ಆತಂಕ ಸೃಷ್ಟಿಸಿದೆ.
ಬಾಳೆಹೊನ್ನೂರು ಸೀಗೋಡಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ 59 ವಿದ್ಯಾರ್ಥಿಗಳು ಮತ್ತು 4ಮಂದಿ ಶಿಕ್ಷಕರು ಮತ್ತು 6ಮಂದಿ ಸಿಬ್ಬಂದಿ ಸೇರಿದಂತೆ 69 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳನ್ನು ನವೋದರ ವಿದ್ಯಾಲಯದಲ್ಲಿ ಐಸೋಲೇಶನ್ ಮಾಡಲಾಗಿದೆ.
ಶಿಕ್ಷಕರೊಬ್ಬರಲ್ಲಿ ಮೊದಲು ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳಲ್ಲಿ ಸೋಂಕಿನ ಯಾವುದೇ ಲಕ್ಷಣ ಕಂಡು ಬಂದಿರಲಿಲ್ಲ, ಶಿಕ್ಷಕರಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 457 ವಿದ್ಯಾ ರ್ಥಿಗಳು ಮತ್ತು ಸಿಬ್ಬಂದಿಗಳ ಸ್ವಾಬ್ ಸಂಗ್ರಹಿಸಿ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಸಲಾ ಗಿತ್ತು.
ಭಾನುವಾರ ಪ್ರಯೋಗಾಲಯದ ವರದಿ ಬಂದಿದ್ದು 457 ಮಂದಿಯಲ್ಲಿ 59 ವಿದ್ಯಾರ್ಥಿ ಗಳು, 4ಜನ ಶಿಕ್ಷಕರು 6ಮಂದಿ ಸಿಬ್ಬಂದಿಗಳಲ್ಲಿ ಸೋಂಕು ಪತ್ತೆಯಾಗಿದೆ. ಭಾರೀ ಪ್ರಮಾ ಣದ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ಸಿಬ್ಬಂದಿಗಳು ಭೇಟಿನೀಡಿ ಸೋಂಕಿತರನ್ನು ಶಾಲೆಯಲ್ಲೆ ಐಸೋಲೇಶನ್ಗೆ ಒಳ ಪಸಿದ್ದಾರೆ. ಜವಾಹರ್ ನವೋದಯ ವಿದ್ಯಾಲಯವನ್ನು ಸೀಲ್ಡೌನ್ ಮಾಡಿದ್ದಾರೆ.
ಕಳೆದ ಕೆಲವು ತಿಂಗಳಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗಿತ್ತು. ಸಾರ್ವಜನಿಕರು ನಿರ್ಲಕ್ಷ್ಯವಹಿಸಿದ್ದರು. ಕೋವಿಡ್ ಸೋಂಕಿನ ಬಗ್ಗೆ ಅಸಡ್ಡೆ ವಹಿಸಿದ್ದು ಒಂದೇ ಭಾರೀ ಈ ಮಟ್ಟದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಜನತೆ ಆತಂಕಕ್ಕೊಳಗಾ ಗಿದ್ದಾರೆ.
ಸೀಗೋಡು ಜವಾಹರ್ ನವೋದಯ ವಿದ್ಯಾಲಯದ 69 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಶಾಲೆಯ 457 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, 59 ವಿದ್ಯಾರ್ಥಿಗಳು ಮತ್ತು 10 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂ ಡಿದೆ. ಶಾಲೆಯಲ್ಲಿ ಹೋಮ್ಐಸೋಲೇಶನ್ಗೆ ಒಳಪಡಿಸಲಾಗಿದೆ. ವೈದ್ಯರು, ನರ್ಸ್ ಸೇರಿದಂತೆ 15ಮಂದಿ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g