7 ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು: ಶಾಲೆಗೆ ಬಸ್ ಕಾಯುತ್ತಿದ್ದ ವೇಳೆ ಕುಸಿದು ಬಿದ್ದು ನಿಧನ
1 min readಮೂಡಿಗೆರೆ: ಶಾಲೆಗೆ ತೆರಳಲು ಬಸ್ ಕಾಯುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಸರ್ಕಲ್ ಬಳಿ ನಡೆದಿದೆ.
ಮೂಡಿಗೆರೆ ತಾಲೂಕಿನ ಜೊಗಣ್ಣನಕೆರೆ ಗ್ರಾಮದ ಕೆಸವಳಲು ಸಮೀಪದ ಸೃಷ್ಟಿ(13) ಮೃತ ಶಾಲಾ ಬಾಲಕಿಯಾಗಿದ್ದು, ದಾರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತಿದ್ದ ಸೃಷ್ಟಿ ಗ್ರಾಮದ ಅರ್ಜುನ ಹಾಗೂ ಸುಮ ದಂಪತಿಗಳ ಮಗಳಾಗಿದ್ದು, ಇಂದು ಬೆಳಿಗ್ಗೆ 9.30.ರ ಸಮಯದಲ್ಲಿ ಶಾಲೆಗೆ ಹೊಗಲು ದಾರದಹಳ್ಳಿ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾಳೆ. ಕೂಡಲೆ ಮೂಡಿಗೆರೆ ಎಂ.ಜಿ.ಎಂ ಆಸ್ಪತ್ರೆಗೆ ಬಾಲಕಿಯನ್ನು ರವಾನಿಸಿದ್ದಾರೆ. ಆದರೆ ಸ್ಥಳದಲ್ಲೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿನಿಯ ಪಾರ್ಥಿವ ಶರೀರವನ್ನು ಕೆಸವಳಲಿಗೆ ತೆಗೆದುಕೊಂಡು ಹೊಗಲಾಗಿದೆ. ಇಂದೆ ಅಂತಿಮ ಸಂಸ್ಕಾರ ಸಹಾ ನಡೆಯಲಿದ್ದು ತಾಯಿ ತಂದೆ ಇಬ್ಬರು ಸಹೋದರಿಯರು ಒಬ್ಬ ಸಹೊದರರನ್ನು ಸೃಷ್ಟಿ ಅಗಲಿದ್ದಾಳೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g