9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು, ನೋವಲ್ಲೂ ನೇತ್ರದಾನ ಮಾಡಿದ ಪೋಷಕರು
1 min read
ಚಿಕ್ಕಮಗಳೂರು : ಹೃದಯಾಘಾತದಿಂದ 9ನೇ ತರಗತಿ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ಪಟ್ಟನದಲ್ಲಿ ನಡೆದಿದೆ. ಮೃತಳನ್ನ 14 ವರ್ಷದ ವೈಷ್ಣವಿ ಎಂದು ಗುರುತಿಸಲಾಗಿದೆ. ಬಾಲಕಿ ಸಾವನ್ನಪ್ಪುತ್ತಿದ್ದಂತೆ ಆಕೆಯ ಪೋಷಕರು ಕೂಡಲೇ ಆಕೆಯ ಕಣ್ಣುಗಳನ್ನ ದಾನ ಮಾಡಲು ಮುಂದಾಗಿದ್ದಾರೆ. ಸಂಜೆ 7.30ರ ಸುಮಾರಿಗೆ ಸ್ಥಳಿಯರು ಚಿಕ್ಕಮಗಳೂರು ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ, ಅಧಿಕಾರಿಗಳು ಬರುತ್ತೇವೆ….ಬರುತ್ತೇವೆ ಎಂದು ಹೇಳಿ 12 ಗಂಟೆಯಾದರೂ ಹೋಗಿಲ್ಲ. ಮಗಳ ಸಾವಿನ ನೋವಿನಲ್ಲೂ ಆಕೆ ಪೋಷಕರು ಕಣ್ಣು ಕೊಡಲು ಮುಂದಾಗಿದ್ದಾರೆ,
ಅದರೆ, ಅಧಿಕಾರಿಗಳು ಬರುತ್ತಿಲ್ಲ ಎಂದು ಸ್ಥಳಿಯರು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಬಳಿಕ ಸ್ಥಳಿಯರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಬಳಿಕ ರಾತ್ರಿ 1 ಗಂಟೆ ಸುಮಾರಿಗೆ ಅಧಿಕಾರಿಗಳು ಹೋಗಿ ಕಣ್ಣನ್ನ ತಂದಿದ್ದಾರೆ. ಮೃತ ವೈಷ್ಣವಿ ಪೋಷಕರು 14 ವರ್ಷದ ಮಗಳ ಸಾವಿನ ನೋವಿನಲ್ಲೂ ಕಣ್ಣುಗಳನ್ನ ದಾನ ಮಾಡಿ ಮಗಳ ಕಣ್ಣು ಮತ್ತೊಬ್ಬರ ದೇಹ ಸೇರಿ ಜಗತ್ತನ್ನ ನೋಡಲು ಕಾರಣಕರ್ತರಾಗಿ, ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g