ಟ್ರಕ್ಕಿಂಗ್ ಗೆ ತೆರಳಿದ್ದ ಯುವಕ ಹೃದಯಾಘಾತದಿಂದ ಸಾವು
1 min readಟ್ರಕ್ಕಿಂಗ್ ಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ವ್ಯಾಪ್ತಿಯ ನೇತ್ರಾವತಿ ಪೀಕ್ ಬಳಿ ನಡೆದಿದೆ. ಮೃತನನ್ನ ಮೈಸೂರು ಮೂಲದ 27 ವರ್ಷದ ರಕ್ಷಿತ್ ಎಂದು ಗುರುತಿಸಲಾಗಿದೆ. ಮೃತ ರಕ್ಷಿತ್ ತನ್ನ ಏಳು ಜನ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು
ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಹೊಂದಿಕೊಂಡಂತಿರುವ ಕುದುರೆಮುಖ ಅರಣ್ಯ ವ್ಯಾಪ್ತಿಯ ನೇತ್ರಾವತಿ ಪೀಕ್ ಗೆ ಚಾರಣಕ್ಕೆಂದು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕಳಸ ಪೊಲೀಸರು ಗುಡ್ಡದ ತುದಿಯಿಂದ ಮೃತದೇಹವನ್ನ ಕಳಸ ಸರ್ಕಾರಿ ಆಸ್ಪತ್ರೆಗೆ ತಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g