3ನೇ ದಿನಕ್ಕೆ ಕಾಲಿಟ್ಟಿ ಧರಣಿ- ಸ್ಥಳಕ್ಕೆ ಬಾರದ ಅಧಿಕಾರಿಗಳು- ಹೋರಾಟಗಾರರ ಆಕ್ರೋಶ
1 min readಚಿಕ್ಕಮಗಳೂರು : ನಿವೇಶನ ರಹಿತರಿಗೆ ನಿವೇಶನ ಮಂಜೂರಾತಿಗೆ ಒತ್ತಾಯಿಸಿ ಭಾರತೀಯ ಕಮ್ಯೂನಿಷ್ಟ್ ಪಕ್ಷದ ನೇತೃತ್ವದಲ್ಲಿ ಆಜಾದ್ ಪಾರ್ಕ್ ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಯಾವೋಬ್ಬ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆ ಹೋರಾಟದ ಮಜುಲುಗಳನ್ನು ಬದಲಾಯಿಸುವ ಬಗ್ಗೆ ಚಿಂತಿಸಲಾಯಿತು.
ಈ ವೇಳೆ ಅಧಿಕಾರಿಗಳ ನಿರ್ಲಕ್ಷಕ್ಕೆ ಆಕ್ರೋಶ ವ್ಯಕ್ತಪಡಿಸಿದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಮುಖಂಡರಾದ ರಾಧಾ ಸುಂದರೇಶ್ ನಿವೇಶನ ರಹಿತರು ನಿವೇಶನ ಮಂಜೂರಾತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿದ್ದರು ಜಿಲ್ಲಾಡಳಿತವಾಗಲಿ ಅಥವಾ ಯಾವುದೇ ಅಧಿಕಾರಿಗಳಾಗಿ ಭೇಟಿ ನೀಡಿ ಹೋರಾಟಗಾರರ ಸಮಸ್ಯೆಯನ್ನು ಆಲಿಸದ ಹಿನ್ನೆಲೆ ಹೋರಾಟದ ರೂಪುರೇಷೆಗಳನ್ನು ಬದಲಾಯಿಸಲಾಗುವುದು ಎಚ್ಚರಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ತಾಲೂಕು ಕಾರ್ಯದರ್ಶಿ ರಮೇಶ್ ಕೆರಮಕ್ಕಿ ನಾವು ಮೂರು ದಿನಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೂ ಸರ್ಕಾರವಾಗಲಿ, ಅಧಿಕಾರಿಗಳಾಗಲಿ, ಯಾರು ಕೂಡ ಬಂದು ವಿಚಾರಿಸದೆ ನಿರ್ಲಕ್ಷ ತೋರಿದ್ದಾರೆ. ಹೀಗೆ ನಿಲಕ್ಷ ತೋರಿಸಿದಲ್ಲಿ ಎಲ್ಲಾ ಸಮಾನ ಮನಸ್ಕರು ಸೇರಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ. ಜಿಲ್ಲೆಯ 48 ಗ್ರಾಮ ಪಂಚಾಯಿತಿಯವರು ಇಲ್ಲಿ ಸೇರಿದ್ದೇವೆ, ಮೂಡಿಗೆರೆ ಶಾಸಕರು ಮಾಡುತ್ತಿರುವ ಪ್ರವಾಸವನ್ನ ಕೈ ಬಿಟ್ಟು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g