ಕಾರಿನ ಮೇಲೆ ಬಿದ್ದ ಮರ, ಎರಡೇ ನಿಮಿಷದಲ್ಲಿ ಎರಡು ಜೀವ ಸೇಫ್…!
1 min read
ಚಿಕ್ಕಮಗಳೂರು. ಭಾರೀ ಮಳೆ-ಗಾಳಿಗೆ ಕಾರಿನ ಮೇಲೆ ಮರ ಬಿದ್ದು ಕಾರಿನ ಹಿಂದಿನ ಭಾಗ ಬಹುತೇಕ ಜಖಂ ಆಗಿದ್ದು, ಎರಡೇ ನಿಮಿಷದಲ್ಲಿ ಎರಡು ಜೀವ ಪವಾಡ ಸದೃಶ ಪಾರಾಗಿರುವ ಆಶ್ಚರ್ಯದಾಯಕ ಘಟನೆ ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಅನಾರೋಗ್ಯದ ನಿಮಿತ್ತ ಮೂಡಿಗೆರೆ ತಾಲೂಕಿನ ಗೋಣಿಬೀಡು ಮೂಲದ ದಂಪತಿಗಳು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದರು. ಕಾರನ್ನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಿ ದಂಪತಿಗಳಿಬ್ಬರು ಇಳಿದು ಆಸ್ಪತ್ರೆಯತ್ತ ಹೆಜ್ಜೆ ಹಾಕುತ್ತಿದ್ದಂತೆ ಆಸ್ಪತ್ರೆ ಆವರಣದಲ್ಲಿದ್ದ ಮರ ಮಳೆಗಾಳಿಗೆ ಕಾರಿನ ಹಿಂಭಾಗದ ಮೇಳೆ ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದ ದಂಪತಿಗಳು ಅಪಾಯದಿಂದ ಪಾರಾಗಿದ್ದಾರೆ. ಕಾರು ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣೆಯ ಸಿಬ್ಬಂದಿ ಶಿವು ಎಂಬುವರಿಗೆ ಸೇರಿದ ಕಾರು ಎಂದು ಹೇಳಲಾಗಿದೆ. ಆದರೆ ಮಾತ್ರ, ದಂಪತಿಗಳು ಕಾರಿನಿಂದ ಇಳಿಯುತ್ತಿದ್ದಂತೆ ಮರ ಬಿದ್ದು ಕಾರು ಜಖಂಗೊಂಡಿದ್ದು, ಕೂದಲೆಳೆ ಅಂತರದಲ್ಲಿ ದಂಪತಿಗಳು ಅಪಾಯದಿಂದ ಪಾರಾಗಿದ್ದರಿಂದ ಆಸ್ಪತ್ರೆ ಆವರಣದಲಿದ್ದವರ ಆಶ್ಚರ್ಯಕ್ಕೀಡಾಗಿದ್ದಾರೆ. ದಂಪತಿಗಳು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ.
ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದಲೂ ಆಗ್ಗಾಗ್ಗೆ ಮಳೆ ಸುರಿಯುತ್ತಿದೆ. ಕೆಲವು ಬಾರಿ ಭಾರೀ ಗಾಳಿಯೊಂದಿಗೆ ಮಳೆ ಸುರಿಯುತ್ತಿದೆ. ಎರಡು ದಿನಗಳ ಹಿಂದಷ್ಟೆ ಭಾರೀ ಗಾಳಿಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಬಾಳೆಹೊನ್ನೂರು-ಹೊರನಾಡು ರಸ್ತೆ ಸಂಪರ್ಕ ಸುಮಾರು ಒಂದು ಗಂಟೆಗಳ ಕಾಲ ಕಡಿತಗೊಂಡಿತ್ತು. ಜಿಲ್ಲಾದ್ಯಂತ ಸಾಧಾರಣ ಮಳೆಯಾಗುತ್ತಿದ್ದು ಭಾರೀ ಗಾಳಿ ಬೀಸುತ್ತಿದ್ದು, ಗಾಳಿಗೆ ಅಲ್ಲಲ್ಲೇ ಮರ-ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಕೆಲವೆಡೆ ಕಾಫಿ ಗಿಡಗಳು ಮುರಿದು ಬಿದ್ದಿವೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g