ಜಿಲ್ಲಾ ಛಾಯಾಗ್ರಾಹಕ ಸಂಘದ ಜಿಲ್ಲಾಧ್ಯಕ್ಷರಾಗಿ ಜಯಚಂದ್ರ ಪುನರಾಯ್ಕೆ
1 min readಚಿಕ್ಕಮಗಳೂರು : ಜಿಲ್ಲಾ ಛಾಯಗ್ರಾಹಕ ಸಂಘದ ಕಾರ್ಯಕಾರಿ ಮಂಡಳಿಯ 2022 ಮತ್ತು 23 ನೇ ಸಾಲಿಗೆ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು.
ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಜಿಲ್ಲಾ ಛಾಯಾಗ್ರಾಹಕ ಸಂಘಕ್ಕೆ ಚುನಾವಣೆ ನಡೆದಿದ್ದು, ಚುನಾವಣಾಧಿಕಾರಿಗಳಾಗಿ ನೇಮಕಗೊಂಡಿದ್ದ ಜಿಲ್ಲಾ ಛಾಯಾಗ್ರಾಹಕ ಸಂಘದ ಗೌರವಾಧ್ಯಕ್ಷ ಎಂ.ಒ. ಜೋಯ್ ಸಮ್ಮುಖದಲ್ಲಿ ಆಯ್ಕೆ ನಡೆಯಿತು. ಈ ವೇಳೆ ಸೇರಿದ್ದ ಜಿಲ್ಲೆಯ ಎಲ್ಲಾ ತಾಲೂಕು ಛಾಯಾಗ್ರಾಹಕ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಚುನವಾನೆಯಲ್ಲಿ ಜಯಚಂದ್ರರವನ್ನು ಜಿಲ್ಲಾಧ್ಯಕ್ಷರನ್ನಾಗಿ ಅವಿರೋಧವಾಗಿ ಮರು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ರೇಣುಕಪ್ಪ, ಖಜಾಂಚಿಯಾಗಿ ಬಾಳೆಹೊನ್ನೂರು ಬಾಲು ಅವಿರೋಧವಾಗಿ ಆಯ್ಕೆಗೊಂಡರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g