ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಬೀಗಿದ್ದು, ಬಿಜೆಪಿಯ ಭದ್ರಕೋಟೆ ಛಿದ್ರಗೊಂಡಿದೆ.
1 min readಚಿಕ್ಕಮಗಳೂರು ಕ್ಷೇತ್ರದ ನೂತನ ಶಾಸಕ ಹೆಚ್.ಡಿ ತಮ್ಮಯ್ಯ ಮತ ಎಣಿಕೆ ಕೇಂದ್ರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ನನ್ನ ಮೊದಲ ಆದ್ಯತೆ ಜನಸ್ನೇಹಿ ಆಡಳಿತ ಹಾಗೂ ಗ್ರಾಮಾಂತರ ಪ್ರದೇಶಗಳಿಗೆ ನೀರಾವರಿ ಯೋಜನೆಗಳನ್ನು ನೀಡುವುದರ ಜೊತೆಗೆ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಕ್ಕೆ ತರಲು ಶ್ರಮಿಸುತ್ತೇನೆ ಎಂದು ಹೇಳಿದರು.
ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನನಗೆ ಮತ ನೀಡಿ ಜಯಶೀಲರನ್ನಾಗಿಸಿರುವ ಮತದಾರ ಬಂಧುಗಳಿಗೆ, ಪಕ್ಷದ ಎಲ್ಲಾ ಸ್ಥರದ ಮುಖಂಡರಿಗೆ ಹಾಗೂ ನನ್ನ ಹಿತೈಷಿಗಳಿಗೆ, ಅಭಿಮಾನಿಗಳಿಗೆ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಮೊದಲಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರುಕಳೆದ ನಾಲ್ಕು ಅವಧಿಯಿಂದ ಈ ಕ್ಷೇತ್ರದಲ್ಲಿ ಬಿಜೆಪಿಯ ರಾಷ್ಟಿçÃಯ ಕಾರ್ಯದರ್ಶಿ ಸಿ.ಟಿ ರವಿಯವರನ್ನು ಗೆಲ್ಲಿಸುತ್ತಿದ್ದ ಮತದಾರರು ಈ ಬಾರಿ ನನ್ನನ್ನು ಗೆಲ್ಲಿಸಿದ್ದಾರೆ ಇದು ನನ್ನ ಗೆಲುವಲ್ಲ ಮತದಾರರ ಗೆಲುವು ಎಂದು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನನಗೆ ಮತ ನೀಡಿ ಜಯಶೀಲರನ್ನಾಗಿಸಿರುವ ಮತದಾರ ಬಂಧುಗಳಿಗೆ,
ಪಕ್ಷದ ಎಲ್ಲಾ ಸ್ಥರದ ಮುಖಂಡರಿಗೆ ಹಾಗೂ ನನ್ನ ಹಿತೈಷಿಗಳಿಗೆ, ಅಭಿಮಾನಿಗಳಿಗೆ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಮೊದಲಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.ಕಳೆದ ನಾಲ್ಕು ಅವಧಿಯಿಂದ ಈ ಕ್ಷೇತ್ರದಲ್ಲಿ ಬಿಜೆಪಿಯ ರಾಷ್ಟಿçÃಯ ಕಾರ್ಯದರ್ಶಿ ಸಿ.ಟಿ ರವಿಯವರನ್ನು ಗೆಲ್ಲಿಸುತ್ತಿದ್ದ ಮತದಾರರು ಈ ಬಾರಿ ನನ್ನನ್ನು ಗೆಲ್ಲಿಸಿದ್ದಾರೆ ಇದು ನನ್ನ ಗೆಲುವಲ್ಲ ಮತದಾರರ ಗೆಲುವು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.ಕಳೆದ ಐದು ವರ್ಷಗಳಿಂದ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ನಡೆಸುವುದರ ಜೊತೆಗೆ ಭಾರೀ ಪ್ರಮಾಣದಲ್ಲಿ ಭ್ರಷ್ಠಾಚಾರ ಮಾಡುವುದನ್ನು ಸಹಿಸಲಾಗದೆ ಪಕ್ಷ ತೊರೆದು ಹೊರ ಬರಬೇಕಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆ.ಪಿ.ಸಿ.ಸಿ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ರಾಜ್ಯ ಮಟ್ಟದ ಎಲ್ಲಾ ಮುಖಂಡರು, ಕಾರ್ಯಕರ್ತರಿಗೂ ಅಭಿನಂದಿಸುತ್ತೇನೆAದರು.
ಇದೇ ಸಂದರ್ಭದಲ್ಲಿ ಮಾಜಿ ಎಂ.ಎಲ್.ಸಿ ಗಾಯಿತ್ರಿಶಾಂತೇಗೌಡ, ಕೆ.ಪಿ.ಸಿ.ಸಿ ವಕ್ತಾರ ಹೆಚ್.ಹೆಚ್ ದೇವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ, ಬಿ.ಹೆಚ್ ಹರೀಶ್, ಮಹಡಿಮನೆ ಸತೀಶ್, ರೂಬಿನ್ ಮೊಸಸ್ ಮತ್ತಿತರರು ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g