ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ : ಹೆಚ್.ಡಿ ತಮ್ಮಯ್ಯ
1 min readಚಿಕ್ಕಮಗಳೂರು : ಸಾಮೀಲ್ ಮಾಲೀಕರು ಹಾಗೂ ಟಿಂಬರ್ ವ್ಯಾಪಾರಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನ ಪೂರ್ವಕ ಸನ್ಮಾನ ಸ್ವೀಕರಿಸಿ ಮಾತನಾಡಿದ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಗಣಪತಿ ಸಮಿತಿಗೆ, ಕೋದಂಡ ರಾಮ ಸ್ವಾಮಿ ದೇವಸ್ಥಾನಕ್ಕೆ ಅಧ್ಯಕ್ಷನಾಗಿ ಕೆಲಸ ಮಾಡುವ ಸಮಯದಲ್ಲಿ ದಾನಿಗಳ ಬಳಿ ಸಂಗ್ರಹಕ್ಕೆ ಹೋದಾಗ ಅವರು ನೀಡುತ್ತಿದ್ದ 500 ರೂಪಾಯಿ ದೊಡ್ಡ ಹಣವಾಗಿತ್ತು. ಇದನ್ನು ಚಂದಾ ವಸೂಲಿ ಎಂದು ಹೇಳುವುದಿಲ್ಲ, ಸಂಘದಲ್ಲಿ ಸಂಗ್ರಹ ಎಂದು ಹೇಳಿಕೊಟ್ಟಿದ್ದಾರೆ. ನಾನು ಬಿಜೆಪಿಯಲ್ಲಿ 15-16 ವರ್ಷವಿದ್ದು, ಈಗಲೂ ಸಂಘದ ಸ್ವಯಂ ಸೇವಕನೇ, ನಾನು ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಸಂಘದಲ್ಲಿರುವ ಶಿಸ್ತಿನಿಂದಾಗಿ ನಾನೊಬ್ಬ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ಆದರೆ ಜಾತ್ಯಾತೀತ ವ್ಯಕ್ತಿ, ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲು ಪ್ರಮಾಣ ವಚನ ಸ್ವೀಕರಿಸಿದೆ ಅದರಂತೆ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಮೂಲಕ ಶಾಂತಿ ಸೌಹಾರ್ಧತೆ ಕಾಪಾಡುವ ಕೆಲಸ ಮಾಡುತ್ತೇನೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g