April 29, 2024

MALNAD TV

HEART OF COFFEE CITY

100 ಟನ್ ತೂಕವುಳ್ಳ 20 ಅಡಿ ಉದ್ದವಿರೋ ಬೃಹತ್ ಶಿಲೆ

1 min read

100 ಟನ್ ತೂಕವುಳ್ಳ 20 ಅಡಿ ಉದ್ದವಿರೋ ಬೃಹತ್ ಶಿಲೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠದ ಆವರಣ ತಲುಪಿದೆ. ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ 51 ಅಡಿ ಎತ್ತರದ ಜಗದ್ಗುರು ರೇಣುಕಾಚಾರ್ಯರ 51 ಅಡಿ ಎತ್ತರದ ಪ್ರತಿಮೆ ನಿರ್ಮಾಣಗೊಳ್ಳುತ್ತಿದೆ.

ಈ ಪ್ರತಿಮೆ ನಿರ್ಮಾಣಕ್ಕೆ ಆಂಧ್ರಪ್ರದೇಶದ ಮಡಕಶಿರಾ ಕಲ್ಲು ಕ್ವಾರಿಯಿಂದ ಈ ಬಹೃತ್ ಶಿಲೆ ಮಠದ ಆವರಣಕ್ಕೆ ಆಗಮಿಸಿದೆ. ಸೆಪ್ಟೆಂಬರ್ 10 ರಂದು ಆಂಧ್ರಪ್ರದೇಶದ ಮಡಕಶಿರಾದಿಂದ 100 ಚಕ್ರದ ಲಾರಿಯಲ್ಲಿ ಹೊರಟ ಈ ಶಿಲೆ 5 ದಿನಗಳ ಬಳಿಕ ಮಠಕ್ಕೆ ಆಗಮಿಸಿದೆ. ಇದರ ತೂಕ ಸುಮಾರು 100 ಟನ್ ಇದ್ದು, 20 ಅಡಿ ಉದ್ದವಿದೆ. ಸಾಗಾಣೆ ಕಾರ್ಯದಲ್ಲಿ 12 ಕಾರ್ಮಿಕರು ತೊಡಗಿದ್ದಾರೆ ಎಂದು ಕಲ್ಲು ಸಾಗಾಟದ ಜಾವಾಬ್ದಾರಿ ಹೊತ್ತಿದ್ದ ಬೆಂಗಳೂರು ಮೂಲದ ಶ್ರೀಧರಬಾಬು ತಿಳಿಸಿದ್ದಾರೆ. ಆಂಧ್ರದಿಂದ ಪಾವಗಡ, ಮಧುಗಿರಿ, ತುಮಕೂರು, ತಿಪಟೂರು, ಶಿವಮೊಗ್ಗ, ಎನ್.ಆರ್.ಪುರ ಮಾರ್ಗವಾಗಿ ಬಂದು ಬಾಳೆಹೊನ್ನೂರು ತಲುಪಿದೆ. ಶಿಲಾಮೂರ್ತಿ ನಿರ್ಮಾಣಕ್ಕೆ ಬೇಕಾಗಿರುವ ಇನ್ನೂ 2 ಶಿಲೆಗಳು ಶೀಘ್ರವೇ ಮಠಕ್ಕೆ ಬರಲಿವೆ. ಯಂತ್ರಗಳ ಬಳಕೆಯಿಂದ ಕಲ್ಲನ್ನ ಅನ್ ಲೋಡ್ ಮಾಡಲು ಮುಂದಾದರೆ ಕಲ್ಲಿಗೆ ಹಾನಿಯಾಗುವ ಸಾಧ್ಯತೆ ಇದೆ. ಹಾಗಾಗಿ, 16 ಕಾರ್ಮಿಕರು ಬಳಸಿ ಲಾರಿಯಿಂದ ಅನ್ ಲೋಡ್ ಮಾಡಲಾಗುವುದು ಎಂದು ಶ್ರೀಧರಬಾಬು ಮಾಹಿತಿ ನೀಡಿದ್ದಾರೆ. ಈ ಶಿಲೆಯನ್ನ ನೋಡಲು ಸುತ್ತಮುತ್ತಲಿನ ಜನ ಕೂಡ ದೇವಾಲಯದ ಆವರಣದಲ್ಲಿ ಜಮಾಯಿಸಿದರು. ರಂಭಾಪುರಿ ಮಠದ ಆವರಣದಲ್ಲಿ 8 ಕೋಟಿಗೂ ಅಧಿಕ ವೆಚ್ಚದಲ್ಲಿ 51 ಅಡಿ ಎತ್ತರದ ಜಗದ್ಗುರು ರೇಣುಕಾಚಾರ್ಯರ ಮೂರ್ತಿ ನಿರ್ಮಾಣಗೊಳ್ಳಲಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!