ಕಂದಕಕ್ಕೆ ಉರುಳಿದ ಬಸ್; ಓರ್ವ ಮಹಿಳೆ ಸಾವು
1 min read
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪ್ರಪಾತಕ್ಕೆ ಉರುಳಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೇಬೈಲು ಕ್ರಾಸ್ ಬಳಿ ನಡೆದಿದೆ.
ಬೆಂಗಳೂರಿನ ಯಲಹಂಕ ನಿವಾಸಿ ಸುರೇಖ (45), ಮೃತ ಮಹಿಳೆ.ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿದೆ.
ಬಸ್ಸಿನಲ್ಲಿ 48ಕ್ಕೂ ಹೆಚ್ಚು ಪ್ರವಾಸಿಗರು ಪ್ರಯಾಣ ಮಾಡುತ್ತಿದ್ದು, ಬೆಂಗಳೂರು -ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಬಸ್ ಹೋಗುತ್ತಿತ್ತು. ಬೆಳಗಿನ ಜಾವ 4:45 ಸಮಯದಲ್ಲಿ ಈ ಘಟನೆ ನಡೆದಿದೆ.
ಸದ್ಯ ಗಾಯಾಳುಗಳಿಗೆ ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಡೆಗೋಡೆ ನಿರ್ಮಿಸಿದೆ ಇರುವುದೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ. ಹೌದು ತಡೆ ಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಸ್ಥಳೀಯರು ಮನವಿ ಮಾಡಿದ್ದಾರೆ.
ಇದೇ ಜಾಗದಲ್ಲಿ 20ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆಲ್ಲ ಕಾರಣ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g