May 18, 2024

MALNAD TV

HEART OF COFFEE CITY

ಹಳ್ಳ ದಾಟುವಾಗ ಕಾಲು ಜಾರಿ ಬಿದ್ದ ಮಗು ನೀರುಪಾಲು

1 min read

ಚಿಕ್ಕಮಗಳೂರು : ಕಾಫಿ ನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬಿಡುವು ಕೊಡದೆ ಸುರಿಯುತ್ತಿರುವ ಮಳೆಯಿಂದ ಮಲೆನಾಡು ಭಾಗದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳ ನೀರು ಮೇರೆ ಮೀರಿ ಹರಿಯುತ್ತಿರುವುದರಿಂದ ಸೇತುವೆಗಳಿಲ್ಲದೆ ಹಳ್ಳದಲ್ಲಿ ಹೋಗಬೇಕಾದ ದಾರಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದು. ಇದರಿಂದ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ ಹಳ್ಳ ದಾಟುವಾಗ ವಿದ್ಯಾರ್ಥಿನಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ವರದಿಯಾಗಿದೆ.

ಮಲೆನಾಡಲ್ಲಿ ಮುಂದುವರೆದ ಮಳೆಯ ಆರ್ಭಟದಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಳ್ಳದಾಟಲು ಹೋದ ವಿದ್ಯಾರ್ಥಿ ಹಳ್ಳದ ನೀರಿಗೆ ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಹೊಪೇಟೆ ಗ್ರಾಮದಲ್ಲಿ ನಡೆದಿದೆ. ಹೊಷಪೇಟೆ ಗ್ರಾಮದ ಕಾಫಿ ಎಸ್ಟೆಟ್ ನಲ್ಲಿ ಹರಿಯುತ್ತಿದ್ದ ಹಳ್ಳವನ್ನು 7 ವರ್ಷದ ಶಾಲಾ ವಿದ್ಯಾರ್ಥಿನಿ ಸುಪ್ರಿತ ದಾಟುವಾಗ ಕಾಲು ಜಾರಿ ಬಿದ್ದಿದ್ದಾಳೆ. ಹಳ್ಳದ ನೀರು ರಭಸವಾಗಿ ಹರಿಯತ್ತಿದ್ದುದರಿಂದ ಸುಪ್ರೀತ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಹೊಸಪೇಟೆ ಕಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಸುಪ್ರೀತ ಶಾಲೆ ಮುಗಿಸಿ ಹೊರಟಾಗ ಬಿಡದೆ ಸುರಿಯುತ್ತಿದ್ದ ಮಳೆಯಿಂದ ಆದಷ್ಟು ಬೇಗ ಮನೆ ಸೇರುವ ತವಕದಲ್ಲಿ ಮನೆಯ ಕಡೆ ಹೆಜ್ಜೆ ಹಾಕಿದ್ದಾಳೆ. ಶಾಲೆಯಿಂದ ಮನೆಗೆ ತೆರಳುವಾಗ ಸಿಗುವ ಕಿರುಸೇತುವೆ ದಾಟುವಾಗ ಕಾಲು ಜಾರಿ ಹಳ್ಳಕ್ಕೆ ಬಿದಿದ್ದಾಳೆ. ಪ್ರಕರಣವು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸುದ್ದಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮಗುವಿಗಾಗಿ ಶೋಧ ನಡೆಸಿದ್ದಾರೆ.

https://www.typingbaba.com/translator/kannada-to-english-translation.php

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!