ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲು
1 min readಚಿಕ್ಕಮಗಳೂರು : ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ರವರ ಮೇಲೆ ಮಾನ ನಷ್ಟ ಮೊಕದ್ದಮೆಯ ಕ್ರಿಮಿನಲ್ ದಾವೆಯನ್ನು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ. ರವಿ ಜಿಲ್ಲಾ ನ್ಯಾಯಾಲಯದಲ್ಲಿ ಹೂಡಿದರು.
2022 ರ ಏಪ್ರಿಲ್ 20 ರಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅಕ್ರಮ ಆಸ್ತಿ ಗಳಿಕೆಯ ಬಗ್ಗೆ ಆರೋಪ ಮಾಡಿದ ಹಿನ್ನೆಲೆ , ಅವರ ಮೇಲೆ ಮಾನ ನಷ್ಟ ದಾವೆ ಹೂಡುವ ಬಗ್ಗೆ ಹಲವು ಬಾರಿ ವಕೀಲರಿಂದ ನೋಟಿಸನ್ನು ನೀಡಲಾಗಿತ್ತು. ನೋಟಿಸಿಗೆ ಸ್ಪಂಧಿಸದಿರುವ ಕಾರಣ ಚಿಕ್ಕಮಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಟಿ.ರವಿ ಯಾರ ಮೇಲೆ ಏನು ಬೇಕಾದರೂ ಹೇಳಬಹುದೆನ್ನುವ ಮನಸ್ಥಿತಿಗೆ ಕೆಲವರು ಬಂದಿದ್ದಾರೆ. ಸುಳ್ಳು ಆರೋಪ ಮಾಡಿದ ಮೇಲು ಅದನ್ನು ಸಮರ್ಥನೆ ಮಾಡಿಕೊಳ್ಳುವ ಕೆಟ್ಟ ಮನಸ್ಥಿತಿ ಇದೆ. ಕಾನೂನಿನ ಮೂಲಕ ನ್ಯಾಯ ಪಡೆಯುವುದು ಹಾಗೂ ಯಾರ ಮೇಲೆಬೇಕಾದರೂ ಆರೋಪ ಮಾಡಬಹುದೆನ್ನುವುದು ಈ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ ಎನ್ನುವುದನ್ನು ನಿರೂಪಿಸಬೇಕಿದೆ. ಚಿಕ್ಕಮಗಳೂರು ಜನ ನನ್ನ 4 ಬಾರಿ ಗೆಲ್ಲಿಸಿದ್ದಾರೆ. ಸುಳ್ಳು ಆರೋಪ ಮಾಡಿ ಇಡಿ ರಾಜ್ಯದಲ್ಲಿ ನನ್ನ ಮೇಲೆ ತಪ್ಪು ಅಭಿಪ್ರಾಯ ಬರುವಂತ ಕೆಲಸ ಮಾಡಿದ್ದಾರೆ. ಅವರ ಮೇಲೆ ಮಾನ ನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g