ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯ
1 min readರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬ ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋದ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರುವ ಗರ್ಭೀಣಿ ಮಹಿಳೆ ಯಶೋಧ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ಹೊರಟಿದ್ದರು. ಆಕೆ ಜೊತೆ ಬೇರೊಬ್ಬಳು ಮಹಿಳೆ ಇದ್ದಳು. ಅಜ್ಜಂಪುರದಿಂದ ತರೀಕೆರೆಗೆ ಬಂದು ಶಿವಮೊಗ್ಗ ತೆರುಳಲು ಬಸ್ ಕಾಯುವಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಗ ಸ್ಥಳದಲ್ಲಿದ್ದ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ.
ಆಸ್ಪತ್ರೆಗೆ ಹೊರಟ ಮಹಿಳೆ ಆಸ್ಪತ್ರೆ ಮುಟ್ಟುವ ಮುನ್ನವೇ ಆಸ್ಪತ್ರೆಯ ತುಸು ದೂರದಲ್ಲಿ ತೀವ್ರವಾದ ನೋವಿನಿಂದ ಬಳಲುತ್ತಿದ್ದಳು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ತಾಲೂಕು ವೈದ್ಯಾಧಿಕಾರಿ ಆರ್. ದೇವರಾಜ್ ಆಕೆಯನ್ನ ಆಸ್ಪತ್ರೆಗೆ ಸೇರಿಸಿ ಪ್ರಸೂತಿ ವೈದ್ಯರನ್ನು ಕರೆಸಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಗರ್ಭಿಣಿ ಮಹಿಳೆ ಯಶೋಧ ಬಿ ನೆಗೆಟಿವ್ ರಕ್ತಕ್ಕಾಗಿಯೇ ಶಿವಮೊಗ್ಗ ಹೋಗುತ್ತಿದ್ದರು. ವೈದ್ಯರು ನಿನಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಧೈರ್ಯ ತುಂಬಿ ಹೆರಿಗೆ ಮಾಡಿಸುತ್ತಾರೆ. ಆರಂಭದ ಮೂರು ತಿಂಗಳು ಖಾಸಗಿ ಆಸ್ಪತ್ರೆಗೆ ತೋರಿಸಿದ್ದ ಗರ್ಭಿಣಿ ಯಶೋಧ ಅಲ್ಲಿ ಹೆರಿಗೆಗೆ 30000 ಹಣ ಕೇಳಿದರು ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯರ ಕೆಲಸಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಿಳೆ ಯಶೋಧ ಕೂಡ ತರೀಕೆರೆ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g