ಐತಿಹಾಸಿಕ ಕಾಯ್ದೆ ಅಂಗಿಕರಿಸಿದ ರಾಜ್ಯ ಸರ್ಕಾರಕ್ಕೆ ಫೆಬ್ರವರಿ 4 ರಂದು ಅಭಿನಂದನೆ ಸಮಾರಂಭ
1 min readಸರ್ಕಾರಿ ಒತ್ತುವರಿ ಜಮೀನನ್ನು 30 ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ನೀಡುವ ಕಾಯ್ದೆಯನ್ನು ಅಂಗಿಕರಿಸಿರುವ ರಾಜ್ಯ ಸರ್ಕಾರದ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರಿಗೆ ಹಾಗೂ ಕಂದಾಯ ಸಚಿವ ಆರ್. ಅಶೋಕ್ ರವರಿಗೆ ಅಭಿನಂದನೆ ಸಮರ್ಪಣೆ ಕಾರ್ಯಕ್ರಮವನ್ನು ಫೆಬ್ರವರಿ 4 ರಂದು ಎ.ಐ.ಟಿ. ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಗ್ರೋವರ್ಸ್ ಫೆಡರೇಷನ್ ಅಧ್ಯಕ್ಷ ಡಾ|| ಹೆಚ್.ಟಿ. ಮೋಹನ್ ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಫಿ ಬೆಳೆಗಾರರ ಬಹುವರ್ಷದ ಬೇಡಿಕೆಯಾದ ಸರ್ಕಾರಿ ಜಮೀನನ್ನು ಧೀರ್ಘಕಾಲ ಗುತ್ತಿಗೆ ಆಧಾರದಲ್ಲಿ ನೀಡುವ ಬೇಡಿಕೆಯನ್ನು ಆಲಿಸಿರುವ ರಾಜ್ಯ ಸರ್ಕಾರ, ಕಾಫಿ ಬೆಳೆಗಾರರ ಹಿತಾಸಕ್ತಿ ಕಾಯುವ ಹಿನ್ನೆಲೆಯಲ್ಲಿ ಸರ್ಕಾರಿ ಒತ್ತುವರಿ ಜಮೀನನ್ನು 30 ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ನೀಡುವ ಕಾಯ್ದೆಯನ್ನು ಅಂಗಿಕರಿಸುವ ಮೂಲಕ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಹಾಗೂ ಸಹಕರಿಸಿದ ಮಹನೀಯರಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಫೆಬ್ರವರಿ 4 ರ ಶನಿವಾರದಂದು ಮದ್ಯಾಹ್ನ 2 ಗಂಟೆಗೆ ಚಿಕ್ಕಮಗಳೂರಿನ ಎಐಟಿ ಕಾಲೇಜಿನಲ್ಲಿರುವ ಆ್ಯಂಪಿ ಥಿಯೇಟರ್ ನಲ್ಲಿ ಕೃತಜ್ಞತಾ ಮೂರ್ವಕ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಗ್ರೋವರ್ಸ್ ಫೆಡರೇಷನ್ ಉಪಾಧ್ಯಕ್ಷ ವಸಂತೇ ಗೌಡ, ಮಾಜಿ ಉಪಾಧ್ಯಕ್ಷ ಎಂ.ಎಸ್. ಲಿಂಗಪ್ಪ ಗೌಡ, ಹಾಸನ ಜಿಲ್ಲೆ ಯತೀಶ್, ವಸ್ತಾರೆ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಮಲ್ಲೇಶ್ ಗೌಡ, ಕಾರ್ಯದರ್ಶಿ ರತೀಶ್, ನಿರ್ದೇಶಕ ನಾರಾಯಣ್ ಗೌಡ, ಹಾನೂಬಾಳ್ ಹೋಬಳಿ ಸಂಘದ ಕಾರ್ಯದರ್ಶಿ ಶಿವಕುಮಾರ್,
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g