May 14, 2024

MALNAD TV

HEART OF COFFEE CITY

ಬಜೆಟ್ನಲ್ಲಿ ಟೈಲರ್ ಸಮುದಾಯದ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

1 min read

ಚಿಕ್ಕಮಗಳೂರು : ಅಸಂಘಟಿತ ವಲಯದಲ್ಲಿ ಗುರುತಿಸಿಕೊಂಡಿರುವ ಟೈಲರ್ ವೃತ್ತಿ ಭಾಂದವರನ್ನು ಈ ಬಾರಿಯ ಬಜೆಟ್ನಲ್ಲಿ ನಿರ್ಲಕ್ಷಿಸಿರುವುದು ನಿರಾಶೆಯುಂಟು ಮಾಡಿದೆ ಎಂದು ಟೈಲರ್ ಅಸೋಷಿಯೇಷನ್ ಸಂಘದ ಮಾಜಿ ಜಿಲ್ಲಾಧ್ಯಕ್ಷ ಅಶೋಕ್ ಗಸ್ತಿ ಹೇಳಿದ್ರು, ಇಂದು ಸುದ್ದಿಗೋಷ್ಠಿಯ ನಂತರ ಮಲ್ನಾಡ್ ಟಿವಿಯೊಂದಿಗೆ ಮಾತನಾಡಿದ ಅವರು ಬದುಕಿನ ನಿರ್ವಹಣೆಗಾಗಿ ಟೈಲರ್ಗಳು ಹೋರಾಟ ನಡೆಸುತ್ತಿದ್ದು, ಶೋಚನೀಯ ಪರಿಸ್ಥಿತಿಯಲ್ಲಿದ್ದೇವೆ. ನಮ್ಮನ್ನು ಈ ಬಜೆಟ್ನಲ್ಲಿ ಯಾವುದೇ ಸೌಲಭ್ಯಗಳನ್ನು ನೀಡಿಲ್ಲ, ಯಾವುದೇ ನೆರವಿಗೆ ಧಾವಿಸಿಲ್ಲ, ಇದು ವಿಪರ್ಯಾಸ. ಮುಂಬರುವ ಹೆಚ್ಚುವರಿ ಬಜೆಟ್ನಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ನಗರ ಕ್ಷೇತ್ರ ಸಮಿತಿ ಅಧ್ಯಕ್ಷ ಸುಧೀರ್ ಹೆಚ್.ಆರ್, ಸಂಘಟನಾ ಕಾರ್ಯದರ್ಶಿ ಹೆಚ್.ಆರ್ ರಾಜು, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಸಂಘಟನಾ ಕಾರ್ಯದರ್ಶಿ ಪಾಂಡು ಕುಮಾರ್ ಕೆ.ಜೆ, ಖಜಾಂಚಿ ಸತೀಶ್ ಉಪಸ್ಥಿತರಿದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!