ಓವರ್ ಲೋಡ್ ಪ್ರಯಾಣಿಕರಿಂದ ಮಾರ್ಗ ಮಧ್ಯೆ ಕೆಟ್ಟು ನಿಂತ ಸರ್ಕಾರಿ ಬಸ್
1 min readಚಿಕ್ಕಮಗಳೂರು : ಮಿತಿಮೀರಿದ ಪ್ರಯಾಣಿಕರ ಸಂಖ್ಯೆಯಿಂದಾಗಿ ಸರ್ಕಾರಿ ಬಸ್ಸಿನ ಪರ್ಚ್ ಕಟ್ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ.
ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹೆವಿ ಲೋಡ್ ನಿಂದಾಗಿ ಘಾಟಿಯಲ್ಲಿ ಸಂಚರಿಸಲಾಗದೆ ಮಾರ್ಗ ಮಧ್ಯೆ ಕೆಟ್ಟು ನಿಂತಂತಹ ಘಟನೆ ನಡೆದಿದೆ.60 ಸೀಟಿನ ಸರ್ಕಾರಿ ಬಸ್ಸಿನಲ್ಲಿ100ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದು , ಶಕ್ತಿ ಯೋಜನೆ ಎಫೆಕ್ಟ್ ನಿಂದಾಗಿ ರಾಜ್ಯದೆಲ್ಲೆಡೆ ಮಹಿಳೆಯರ ಸಂಚಾರ ಜೋರಾಗಿ ನಡೆಯುತ್ತಿದ್ದು, ಇಂದು ಸಹ ಧಾರ್ಮಿಕ ಕ್ಷೇತ್ರಕ್ಕೆ ಹೋಗುವ ಮಹಿಳಾ ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಿತ್ತು. ಬಸ್ ಮಾರ್ಗ ಮಧ್ಯೆ ಕೆಟ್ಟು ನಿಂತಿದ್ದರಿಂದ ಮಹಿಳಾಮಣಿಯರು ಬಸ್ಸಿಲ್ಲದೆ ರಸ್ತೆಯಲ್ಲಿಯೇ ಸಾಲಾಗಿ ಕೂತಿದ್ದರು.ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಇದನ್ನು ಗಮನಿಸಿ ಜನರ ಸಮಸ್ಯೆ ಕೇಳಿ, ಕೆ.ಎಸ್.ಆರ್.ಟಿ.ಸಿ ಮತ್ತು ಡಿಸಿಗೆ ಫೋನ್ ಮಾಡಿ ಕೂಡಲೇ ಬಸ್ ಬಿಡುವಂತೆ ಸೂಚನೆ ನೀಡಿದರು.ನಂತರ ಪ್ರಯಾಣಿಕರಿಗೆ ಬಸ್ ಬರದಿದ್ದರೆ ಫೋನ್ ಮಾಡಿ ಎಂದು ನಂಬರ್ ಕೊಟ್ಟು ಹೋದ ಶಾಸಕಿ ನಯನಾ ಮೋಟಮ್ಮ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g