ಗಾಳಿಗೆ ಉರುಳಿ ಬಿದ್ದ ಬೃಹತ್ ಮರ
1 min readಚಿಕ್ಕಮಗಳೂರು.ಕಾಫಿನಾಡಿನ ಮಲೆನಾಡು ಭಾಗದಲ್ಲಿ ಇಂದು ಮಳೆ ಪ್ರಮಾಣ ಬಹುತೇಕ ತಗ್ಗಿದೆ. ಕುದುರೆಮುಖ, ಕೆರೆಕಟ್ಟೆ ಸೇರಿದಂತೆ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದೆ. ಆದರೆ, ಭಾರೀ ಗಾಳಿ ಜಿಲ್ಲಾದ್ಯಂತ ಅಲ್ಲಲ್ಲೇ ಕೆಲ ಅನಾಹುತಗಳನ್ನ ಮಾಡಿದೆ. ಮಲೆನಾಡಿನಾದ್ಯಂತ ಭಾರೀ ಗಾಳಿಗೆ ಅಲ್ಲಲ್ಲೇ ಮರಗಳು ರಸ್ತೆಗೆ ಉರುಳಿದೆ. ವಿದ್ಯುತ್ ಸಂರ್ಕ ಕೂಡ ಕಡಿತಗೊಂಡಿದೆ. ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲೂ ಭಾರೀ ಗಾಳಿಗೆ ಬೃಹತ್ ಮರವೊಂದು ರಸ್ತೆಗೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರ ಬೀಳುವ ವೇಳೆ ಮರದಡಿ ಸಿಲುಕೊಂಡ ಇಬ್ಬರು ಬೈಕ್ ಸವಾರರನ್ನ ಸ್ಥಳಿಯರು ರಕ್ಷಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g