ಮಳೆಯ ಅವಾಂತರಕ್ಕೆ ಕುಸಿದ ಮನೆ
1 min readಚಿಕ್ಕಮಗಳೂರು..: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಚಿಕ್ಕಮಗಳೂರು ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.
ಬಾಳೆಹಳ್ಳಿ ಗ್ರಾಮದ ನಿವಾಸಿ ಜಯರಾಂ ಎಂಬುವರ ಮನೆ ಕುಸಿದಿದ್ದು. ಮಳೆಯ ಆರ್ಭಟಕ್ಕೆ ಮನೆ ಕುಸಿಯುತ್ತಿದ್ದಂತೆ ಮನೆಯಿಂದ ಜಯರಾಂ , ಹಾಗೂ ಪತ್ನಿ , ಮಗ ಹೊರಗಡೆ ಹೋಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಮನೆ ಕಳೆದುಕೊಂಡ ಜಯರಾಂ ಕುಟುಂಬ ಕಂಗಾಲಾಗಿದೆ.
ಇನ್ನು ಚಿಕ್ಕಮಗಳೂರು ನಗರದ ಕೆಂಪನಹಳ್ಳಿಯಲ್ಲಿ ಜಯಪ್ರಕಾಶ್ ಎಂಬುವರಿಗೆ ಸೇರಿದ ಮನೆ ಕುಸಿದಿದ್ದು
ಮನೆ ಕಳೆದುಕೊಂಡು ಜಯಪ್ರಕಾಶ್ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.
ಅತ್ತ ಮೂಡಿಗೆರೆ ತಾಲೂಕಿನ ಊರುಬಗೆ ಯು-ಹೊಸಹಳ್ಳಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಅಲ್ಲದೆ ಮಳೆಯಿಂದಾಗಿ ನಾಟಿ ಮಾಡಿದ್ದ ಗದ್ದೆಗಳು ಸಂಪೂರ್ಣ ಜಲಾವೃತವಾಗಿ ಬೆಳೆ ನೀರುಪಾಲಾಗಿವೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g