April 28, 2024

MALNAD TV

HEART OF COFFEE CITY

ರಸ್ತೆಗೆ ಅಡ್ಡಲಾಗಿ ಉರುಳಿದ ಬಿದ್ದ ಬೃಹತ್ ಮರ, ಸಂಚಾರ ಸ್ಥಗಿತ

1 min read

 

 

ಚಿಕ್ಕಮಗಳೂರು : ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಡುವಿಲ್ಲದೆ ಅಬ್ಬರಿಸುತ್ತಿದೆ.‌ ನಿರಂತರ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊರನಾಡು ಹಾಗೂ ಕೊಟ್ಟಿಗೆಹಾರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದು ಕೆಲ ಗಂಟೆಗಳ ಕಾಲ ಸಂಪರ್ಕ ಅಸ್ತವ್ಯಸ್ತವಾಗಿತ್ತು. ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಮರ ತೆರವು ಕಾರ್ಯಾಚರಣೆ ಬಳಿಕ ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ. ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರ ನೆರವಿನಿಂದ ರಸ್ತೆಯಲ್ಲಿ ಬಿದ್ದಿದ್ದ ಮರ ತೆರವು ಕಾರ್ಯಾಚರಣೆ ನಡೆದಿದ್ದು, ಧಾರಾಕಾರ ಮಳೆಯ ನಡುವೆಯೂ ವಿಪತ್ತು ನಿರ್ವಹಣಾ ತಂಡದ

 

ಕಾರ್ಯಾಚರಣೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆಯಿಂದಲೂ ಭಾರಿ ಗಾಳಿ ಮಳೆಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದ್ದು ನಾಳೆ ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!