ತರಕಾರಿ ತುಂಬಿದ ಲಾರಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು
1 min readಬೈಕಿಗೆ ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ಬಳಿ ಈ ಭೀಕರ ಘಟನೆ ನಡೆದಿದ್ದು ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ 173ರ ಮೂಲಕ ಮಂಗಳೂರಿಗೆ ಹೋಗ್ತಿದ್ದ ಲಾರಿ ರಭಸವಾಗಿ ಬಂದು ಢಿಕ್ಕಿ ಹೊಡೆದಿದೆ. ಮಂಜುನಾಥ್ (30) ಎಂಬಾತ ಮೃತ ಯುವಕನಾಗಿದ್ದು ಈತ ತನ್ನ ತಂದೆ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಬವಿಸಿದ್ದು ಸ್ಥಳದಲ್ಲೇ ಅಸುನೀಗಿದ್ದಾನೆ. ಇನ್ನು ಮೃತ ಯುವಕ ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಎಂದು ಗೊತ್ತಾಗಿದೆ.ಅಪಘಾತದ ರಭಸಕ್ಕೆ ಮೃತದೇಹವನ್ನ ಲಾರಿ 1 ಕಿ.ಮೀ. ದೂರದವರೆಗೂ ಎಳೆದೊಯ್ದ ಹಾಕಿತ್ತು ಎಂದು ಪ್ರತ್ಯಕ್ಷವಾಗಿ ನೋಡಿದವರು ಹೇಳಿದರು. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದುಪೊಲೀಸರು ಲಾರಿ ಚಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g