ರಸ್ತೆ ದಾಟುತ್ತಿದ್ದವರ ಮೇಲೆ ಹರಿದ ಲಾರಿ, ವ್ಯಕ್ತಿ ಸ್ಥಳದಲ್ಲೇ ಸಾವು
1 min read
ಚಿಕ್ಕಮಗಳೂರು : ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಭಾರೀ ತೂಕವಿದ್ದ ಲಾರಿ ಹರಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಅಪ್ಪಚ್ಚಿಯಾಗಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಮೃತರನ್ನ ಕಡೂರು ತಾಲೂಕಿನ ಯಳ್ಳಂಬಳಸೆ ಗ್ರಾಮದ 58 ವರ್ಷದ ಶೇಖರಪ್ಪ ಎಂದು ಗುರುತಿಸಲಾಗಿದೆ. ಮೃತ ಶೇಖರಪ್ಪ ಯಳ್ಳಂಬಳಸೆಯ ಬೀರಲಿಂಗೇಶ್ವರ ಸ್ವಾಮಿ ದೇವಾಲಯದ ಪೂಜಾರಿ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನೆರಲಿಗೆ ಗ್ರಾಮದ ತಂಗಿ ಮನೆಗೆ ಹೋಗಿ ಬರುವಾಗ ಈ ದುರ್ಘಟನೆ ಸಂಭವಿಸಿದೆ. ತಂಗಿ ಮನೆಯಿಂದ ಬಂದ ಶೇಖರಪ್ಪ ಹಳ್ಳಿಗೆ ಹೋಗಲು ಕಡೂರಿನಲ್ಲಿ ರಸ್ತೆ ದಾಟುವಾಗ ಲಾರಿ ಅವರ ಮೇಲೆ ಹರಿದಿದ್ದು ದೇಹ ರಸ್ತೆ ಮಧ್ಯೆಯೇ ಅಪ್ಪಚ್ಚಿಯಾಗಿದೆ. ನಗರದ ಮಧ್ಯೆ ಲಾರಿ ಭಾರೀ ವೇಗವಾಗಿ ಬಂದ ಕಾರಣ ಈ ದುರ್ಘಟನೆ ಸಂಭವಿಸಿದೆ. ಈ ಸಾವಿಗೆ ಲಾರಿ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ರಸ್ತೆ ಮಧ್ಯೆ ಗುರುತೇ ಸಿಗದಂತೆ ವಿಚಿತ್ರವಾಗಿ ಸತ್ತ ವ್ಯಕ್ತಿಯನ್ನ ನೋಡಿ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಲಾರಿ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g