May 7, 2024

MALNAD TV

HEART OF COFFEE CITY

ಶೃಂಗೇರಿಗೆ ಜಗದ್ಗುರುಗಳಿಗೆ ಅಪಮಾನ ಮಾಡಿದ್ದ ವ್ಯಕ್ತಿಗೆ ವರ್ಷ ಜೈಲು

1 min read

 

ಚಿಕ್ಕಮಗಳೂರು. ಶೃಂಗೇರಿ ಶ್ರೀಗಳಿಗೆ ಅಪಮಾನ ಮಾಡಿದ್ದ ವ್ಯಕ್ತಿಗೆ ಶೃಂಗೇರಿ ಕೋರ್ಟ್ ಮೂರು ವರ್ಷ ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಹುಬ್ಬಳ್ಳಿ ಮೂಲದ ಮುನ್ನಾ ಅಜರ್ ಶೃಂಗೇರಿ ಜಗದ್ಗುರುಗಳಿಗೆ ಅಪಮಾನ ಮಾಡಿ ಕೋರ್ಟ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2015ರ ನವೆಂಬರ್ 19ರಂದು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಜಗದ್ಗುರುಗಳ ಬಗ್ಗೆ ಮುನ್ನಾ ಅಜರ್ ಎಂಬಾತ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ. ಈ ಕುರಿತು ಶೃಂಗೇರಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಶೃಂಗೇರಿ ಮಠದ ಹಾಗೂ ಶ್ರೀಗಳ ಭಕ್ತರು ಪ್ರತಿಭಟನೆ ನಡೆಸಿ ಆರೋಪಿಯನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಶೃಂಗೇರಿ ಹಿಂದೂಸ್ ಎಂಬ ಫೇಸ್‍ಬುಕ್ ಪೇಜ್‍ನಲ್ಲಿ ಶೃಂಗೇರಿ ಶ್ರೀ ಮಠದ ಗುರುಪರಂಪರೆ ಕುರಿತ ಮಾಹಿತಿ ನೀಡುವ ಪೋಸ್ಟ್ ವೊಂದನ್ನ ಹಾಕಲಾಗಿತ್ತು. ಅದರಲ್ಲಿ ಶೃಂಗೇರಿ ಶ್ರೀಗಳ ಫೋಟೋ ಸಹ ಇತ್ತು. ಆದರೆ, ಈ ಪೋಸ್ಟ್ ಗೆ ಹುಬ್ಬಳ್ಳಿ ಮೂಲದ ಮುನ್ನಾ ಅಜರ್ ಎಂಬ ವ್ಯಕ್ತಿ ಆ ಪೋಸ್ಟ್ ಗೆ ಅವ್ಯಾಚ್ಯ ಶಬ್ಧಗಳನ್ನ ಬಳಸಿ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದನು. ಈ ಕುರಿತು ಭಕ್ತರ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಶೃಂಗೇರಿಯಲ್ಲೂ ಕೂಡ ಭಕ್ತರು ಭಾರೀ ಪ್ರತಿಭಟನೆ ನಡೆಸಿದ್ದರು.

ಈ ಬಗ್ಗೆ ತನಿಖೆ ಕೈಗೊಂಡ ಶೃಂಗೇರಿ ಪೊಲೀಸರು ಕೆಲವೇ ದಿನಗಳಲ್ಲಿ ಹುಬ್ಬಳ್ಳಿ ಮೂಲದ ಆರೋಪಿ ಮುನ್ನಾ ಅಜರ್ ಎಂಬಾತನನ್ನ ಬಂಧಿಸಿ ಪ್ರಕರಣ ದಾಖಲಿಸಿದ್ದರು. ಸುಧೀರ್ ಹೆಗ್ಡೆ ನೇತೃತ್ವದ ತನಿತ ತಂಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆಯ ಬಳಿಕ ಪ್ರಸ್ತುತ ಶೃಂಗೇರಿ ಕೋರ್ಟ್ ಆರೋಪಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರಾದ ಕ್ರಾಂತಿಕುಮಾರ್ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದ ತನಿಖೆಯನ್ನ 2015ರಲ್ಲಿ ಶೃಂಗೇರಿ ಠಾಣೆಯ ವೃತ್ತ ನಿರೀಕ್ಷಕರಾಗಿದ್ದ ಸುಧೀರ್ ಎಂ. ಹೆಗ್ಡೆ ನಡೆಸಿ ಆರೋಪಿಯನ್ನ ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಯ ವಿರುದ್ಧವಾಗಿ ವಕೀಲೆ ಹರೀಣಾಕ್ಷಿವಾದ ಮಂಡನೆ ನಡೆಸಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!