May 8, 2024

MALNAD TV

HEART OF COFFEE CITY

ಮೊಬೈಲ್ ಕಳ್ಳತನ ಮಾಡಿದ ವ್ಯಕ್ತಿಯನ್ನ ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ಕೊಲೆ

1 min read

ಮೊಬೈಲ್ ಕಳ್ಳತನ ಮಾಡಿದ ವ್ಯಕ್ತಿಯನ್ನ ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮರವಂಜಿ ಗ್ರಾಮದ ಬಳಿ ನಡೆದಿದೆ. ಮೃತನನ್ನ ಕಡೂರು ತಾಲೂಕಿನ ಮಲ್ಲೇದೇವರಹಳ್ಳಿ ಗ್ರಾಮದ 60 ವರ್ಷದ ಮೋಹನ್ ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಡಿ ದರ್ಜೆ ನೌಕರ ಕೆಂಚಪ್ಪ ಆರೋಪಿಯಾಗಿದ್ದು, ಇದೇ 14ರ ಮಂಗಳವಾರ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಮರವಂಜಿ ವೃತ್ತದಲ್ಲಿ ಮೋಹನ ಕುಮಾರ್ ಕೆಂಚಪ್ಪನ ಮೊಬೈಲ್ ಮತ್ತು ಹಣ ಕಸಿದುಕೊಳ್ಳಲು ಯತ್ನಿಸಿದಾಗ ಕೆಂಚಪ್ಪ ಆತನ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆಯಲ್ಲಿ ಜಜ್ಜಿ ಪರಾರಿಯಾಗಿದ್ದಾನೆ. ಬೆಳಿಗ್ಗೆ ಚಿಂತಾಜನಕ ಸ್ಥಿತಿಯಲ್ಲಿ ನರಳುತ್ತಿದ್ದ ವ್ಯಕ್ತಿಯನ್ನ ಸ್ಥಳೀಯರು ನೋಡಿ ಪೊಲೀಸ್  ರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಆತನನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯುವ ವೇಳೆ ಆತ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಮೃತನ ಸಂಬಂಧಿ ರತ್ನಮ್ಮ ಎಂಬುವರು ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಕಡೂರು ಪೊಲೀಸ್ ರು ಸ್ಥಳದಲ್ಲಿರುವ ಸಿಸಿ ಟಿವಿ ಫೂಟೇಜ್‍ಗಳನ್ನ ಪರಿಶೀಲಿಸಿ ಆರೋಪಿ ಕೆಂಚಪ್ಪನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಲೆ ನಡೆದ ಕೆಲವೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!