ಖಾಸಗಿ ಶಿಕ್ಷಣ ಸಂಸ್ಥೆಯೊಂದು ಬೋರ್ಡಿಂಗ್ ಶುಲ್ಕ ಹೆಸರಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕತ್ತಲಾಗುತ್ತಿರೊ ಆರೋಪ
1 min readಚಿಕ್ಕಮಗಳೂರು : ವಿದ್ಯಾರ್ಥಿಗಳ ಬಾಳಲ್ಲಿ ಚೆಲ್ಲಾಟ ಆಡ್ತಿದ್ಯಾ ಅಂಬರ್ ವ್ಯಾಲಿ ಸಂಸ್ಥೆ? ಎನ್ನುವ ಆರೋಪ ಪೋಷಕರಿಂದ ವ್ಯಕ್ತವಾಗಿದೆ. ನಗರದ ಹೊರವಲಯದಲ್ಲಿರುವ ಶಿಕ್ಷಣ ಸಂಸ್ಥೆ ಅಂಬರ್ ವ್ಯಾಲಿಯು ಕಾಫಿಕಿಂಗ್ ದಿವಂಗತ ವಿ.ಜಿ ಸಿದ್ಧಾರ್ಥ ಒಡೆತನದ ಸಂಸ್ಥೆಯಾಗಿದೆ. ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡ್ತಿರೊ ವಿದ್ಯಾರ್ಥಿಗಳು ಟ್ಯೂಷನ್ ಫೀಸ್ ಕಟ್ಟಿದ್ರೂ, ಬೋರ್ಡಿಂಗ್ ಫೀಸ್ ಕಟ್ಟಿದ್ರೆ ಮಾತ್ರ ಪರೀಕ್ಷೆಗೆ ಅವಕಾಶ ನೀಡುತ್ತೇವೆ ಎನ್ನುವ ಮೂಲಕ ಅಂಬರ್ ವ್ಯಾಲಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬರೆ ಎಳೆಯಲು ಹೊರಟಿದೆ ಎನ್ನುವುದು ಪೋಷಕರ ಆರೋಪವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡಿರೊ ಪೋಷಕರು ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡದೆ ಸತಾಯಿಸುತ್ತಿದ್ದಾರೆ, ಕೋವಿಡ್ ಹಿನ್ನೆಲೆಯಲ್ಲಿ ಕಳೆದ 1 ವರ್ಷದಿಂದ ವಿದ್ಯಾರ್ಥಿಗಳು ಮನೆಯಲ್ಲೇ ಇದ್ದಾರೆ, ಹೀಗಿದ್ರೂ ಬೋರ್ಡಿಂಗ್ ಫೀಸ್ ಕಟ್ಟುವಂತೆ ಪೋಷಕರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಶಿಕ್ಷಣ ಸಂಸ್ಥೆಯ ಹಣದಾಸೆಯಿಂದ ಪೋಷಕರು ಬೇಸತ್ತಿದ್ದರೆ, ಪರೀಕ್ಷೆ ಬರೆಯಲಾರದೆ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಿನ್ನೆ, ಇಂದು ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡದೆ ಸತಾಯಿಸುತ್ತಿರುವ ಸಂಸ್ಥೆಯನ್ನು ಪೋಷಕರು ಪ್ರಶ್ನೆ ಮಾಡಿದರೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಉತ್ತರಿಸದೆ ನುಣುಚಿಕೊಳ್ಳುತ್ತಿದ್ದಾರೆ. ಆಡಳಿತ ಮಂಡಳಿಯ ಈ ನಡೆಯಿಂದ ಆದರ್ಶ ಪ್ರಾಯರಾದ ದಿವಂಗತ ಸಿದ್ದಾರ್ಥ್ ಕುಟುಂಬಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಎಂದು ಪೋಷಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://www.youtube.com/channel/UCmBISI2sn_0gamb44UFj-vQ
Credits:
Music : latest 2020 6 different no copyright news background music, royalty free (black mart)
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g