ಮಾಲೀಕರು-ಕಾರ್ಮಿಕರ ನಡುವೆ ಕಂದಕ ಏರ್ಪಡಲು ಬಿಡಲ್ಲ: ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ದೇವವೃಂದ
1 min readಚಿಕ್ಕಮಗಳೂರು: ಕಾಫಿತೋಟದ ಮಾಲೀಕರು ಹಾಗೂ ಕಾರ್ಮಿಕರ ನಡುವೆ ಯಾವುದೇ ಕಂದಕ ಏರ್ಪಡಲು ಕಾಫಿ ಬೋರ್ಡ್ ಬಿಡುವುದಿಲ್ಲ ಎಂದು ಬೋರ್ಡ್ ನ ಅಧ್ಯಕ್ಷ ದಿನೇಶ್ ದೇವವೃಂದ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಲೆನಾಡಿನಲ್ಲಿ ಕಾಡಾನೆ ಹಾವಳಿ ಸಮಸ್ಯೆ ಬಗೆಹರಿಸಲು ಸರ್ಕಾರದ ಜೊತೆ ಮಾತುಕತೆ ನಡೆಸಿದ್ದೇವೆ , ಶಾಶ್ವತ ಪರಿಹಾರಕ್ಕಾಗಿ ಮನವಿ ಮಾಡಿದ್ದೇವೆ ಎಂದು ಹೇಳಿದ ಅವರು ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸದಾ ಮುಂದಿರುವುದಾಗಿ ತಿಳಿಸಿದರು. ಕಾಫಿ ಬೆಳೆಗಾರರ ಒತ್ತುವರಿ ಸಮಸ್ಯೆ ಬಗರಹರಿಸುವ ಬಗ್ಗೆ ಸಹಾ ರಾಜ್ಯ ಸರ್ಕಾರದ ಜೊತೆ ಚರ್ಚೆ ಮುಂದುವರೆದಿದ್ದು ಕಾನೂನಿನ ಅಡೆತಡೆಗಳ ಬಗ್ಗೆ ಸಹಾ ಮಾಹಿತಿ ಪಡೆಯುತ್ತಿರುವುದಾಗಿ ದಿನೇಶ್ ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g