May 20, 2024

MALNAD TV

HEART OF COFFEE CITY

ಕುಡಿಯಲು ಹಣ ನೀಡದ ಹಿನ್ನೆಲೆ ತಾಯಿಯನ್ನೇ ಕೊಂದ ಪಾಪಿ ಮಗ

1 min read

 

ಚಿಕ್ಕಮಗಳೂರು : ಮದ್ಯ ಕುಡಿಯಲು ಹಣ ನೀಡದಿದ್ದಕ್ಕೆ ಪಾಪಿ ಮಗ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೆ.ಬಿದರೆ ಗ್ರಾಮದಲ್ಲಿ ನಡೆದಿದೆ.ಕೆ.ಬಿದರೆ ಗ್ರಾಮದ ಸಂತೋಷ್ ಕೊಲೆ ಮಾಡಿದ ಆರೋಪಿಯಾಗಿದ್ದು, ಕಮಲಮ್ಮ (56) ಮೃತ ದುರ್ದೈವಿ. ಶನಿವಾರ ತಡರಾತ್ರಿ ಮದ್ಯದ ಅಮಲಿನಲ್ಲಿದ್ದ ಸಂತೋಷ್ ಮನೆಯಲ್ಲಿ ತಾಯಿ ಜತೆ ಜಗಳವಾಡಿದ್ದು, ಕುಪಿತಗೊಂಡು ತಾಯಿ ಕಮಲಮ್ಮಳ ಅವರ ಬಲಗೈಯನ್ನು ಬ್ಲೇಡ್‌ನಿಂದ ಕೊಯ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಅಸ್ಪಸ್ಥಗೊಂಡರು. ಕೂಡಲೇ ನೆರೆಹೊರೆಯವರು ಆಂಬುಲೆನ್ಸ್‌ನಲ್ಲಿ ಸಿಂಗಟಗೆರೆ ಪ್ರಾಥಮಿಕ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಸಂತೋಷ್‌ನನ್ನು ಪಂಚನಹಳ್ಳಿ ಠಾಣೆ ಪಿಎಸ್‌ಐ ಬಂಧಿಸಿದ್ದಾರೆ. ಆರೋಪಿ ಅವಿವಾಹಿತನಾಗಿದ್ದು, ಈ ಹಿಂದೆ ಬೈಕ್ ಕಳವು ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.

 

ಇನ್ನು ಗ್ರಾಮಕ್ಕೆ ಎಸ್ಪಿ ಡಾ. ವಿಕ್ರಮ ಅಮಟೆ ಹಾಗೂ ಡಿವೈಎಸ್ಪಿ ಹಾಲಮೂರ್ತಿರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!