ಟಿಪ್ಪರ್ ಲಾರಿ, ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು
1 min read
ಚಿಕ್ಕಮಗಳೂರು : ಟಿಪ್ಪರ್ ಲಾರಿ, ಕಾರು ಹಾಗೂ ಬೈಕ್ ನಡುವೆ ಭೀಕರ ಸರಣಿ ಅಪಘಾತ ನಡೆದಿದ್ದು ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಸಾವನಪ್ಪಿದ್ದು 14 ತಿಂಗಳ ಮಗುವಿಗೆ ಗಂಭೀರ ಗಾಯವಾಗಿರುವ ಘಟನೆ
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ನಡೆದಿದೆ. ಶಿವಮೊಗ್ಗ ಮೂಲದ ಸೈಯದ್ ಆಸಿಫ್ 38 ಹಾಗೂ ಮಜಿನಾ 33 ಸ್ಥಳದಲ್ಲೇ ಮೃತಪಟ್ಟಿದ್ದಾರೆ. 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ದಂಪತಿಗಳು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ, ಇನ್ನು ಕಾರಿನಲ್ಲಿ ಹರೀಶ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಹಾಸನಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g