ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ಮರ, ಚಾಲಕ ಜಸ್ಟ್ ಮಿಸ್
1 min read
ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ ಚಲಿಸುತ್ತಿದ್ದ ಲಾರಿ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಚಾಲಕ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಚೆಕ್ ಪೋಸ್ಟ್ ಬಳಿ ನಡೆದಿದೆ.
ಭಾರೀ ಗಾಳಿ ಮಳೆಗೆ ಮರ ಮುರಿದುಬಿದ್ದಿದೆ. ಮರದ ಜೊತೆ ರಸ್ತೆ ಬದಿಯ ವಿದ್ಯುತ್ ಕಂಬಗಳು ಲಾರಿಯ ಮುಂಭಾಗಕ್ಕೆ ಬಿದ್ದಿದ್ದು ಲಾರಿ ಚಾಲಕ ಅದೃಷ್ಟವಶಾತ್ ಪ್ರಾಣೋಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ವಿದ್ಯುತ್ ಕಂಬದಿಂದ ತಂತಿಗಳು ಬೇರ್ಪಟ್ಟ ಹಿನ್ನೆಲೆ ಆಗಬಹುದಾದ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ವಿಷಯ ತಿಳಿದ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ವಿದ್ಯುತ್ ಕಂಬಗಳನ್ನು ರಸ್ತೆಯಿಂದ ತೆರವುಗೊಳಿಸಿದ್ದಾರೆ. ನಿರಂತರವಾಗಿ ಈ ಭಾಗದಲ್ಲಿ ರಭಸವಾಗಿ ಬೀಸುತ್ತಿರುವ ಗಾಳಿಯೊಂದಿಗೆ ಮಳೆ ಸುರಿಯುತ್ತಿರುವ ಪರಿಣಾಮ ಈ ಭಾಗದಲ್ಲಿ ಸಂಚರಿಸುವ ವಾಹನಗಳು ಪದೇಪದೇ ಇಂತಹ ಅವಘಡಗಳಿಗೆ ಕಾರಣವಾಗುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g