ಮಳೆ-ಗಾಳಿಗೆ ಮನೆ ಮೇಲೆ ಬಿದ್ದ ಮರ, ಮನೆಯಲ್ಲಿದ್ದವರು ಪವಾಡ ಸದೃಶ ಪಾರು
1 min readಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ಮನೆ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ನಡೆದಿದೆ. ಮಾಂಡೌಸ್ ಚಂಡಮಾರುತದ ಎಫೆಕ್ಟ್ನಿಂದ ಕಳೆದ ನಾಲ್ಕೈದು ದಿನಗಳಿಂದ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆ ಜೊತೆ ಆಗಾಗ್ಗೆ ಜೋರು ಮಳೆ ಕೂಡ ಸುರಿಯುತ್ತಿದೆ. ಭಾರೀ ಮಳೆ-ಗಾಳಿಗೆ ಮರ್ಕಲ್ ಗ್ರಾಮದ ಅರೆಕೊಡಿಗೆ ಸಮೀಪದ ಸುಕಲಮಕ್ಕಿ ಗ್ರಾಮದ ನರೇಂದ್ರ ಗೌಡರವರ ಮನೆ ಮೇಲೆ ಬೃಹದಾಕಾರದ ಮರ ಒಂದು ಮನೆ ಮೇಲೆ ಬಿದ್ದು ಮನೆ ಸಂಪೂರ್ಣ ನಜ್ಜುಗೊಜ್ಜಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ. ಕಾಫಿ, ಭತ್ತ, ಅಡಿಕೆ ಮೊದಲಾದ ಬೆಳೆಗಳು ನೆಲಕೆಚ್ಚಿ ಹೋಗಿದೆ. ರೈತರು ಕಂಗಾಲಾಗಿದ್ದಾರೆ. ಸಾಧಾರಣ ಮಳೆಯಾದರೂ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಭತ್ತದ ಗದ್ದೆಗಳಿಗೆ ನೀರು ಅವರಿಸಿದ್ದು, ಗದ್ದೆ ಮಳೆಯಿಂದ ಸಂಪೂರ್ಣ ನಾಶವಾಗುತ್ತಿದೆ. ಅಡಿಕೆ-ಕಾಫಿ-ಮೆಣಸು ಮಳೆ ನೀರಿಲ್ಲಿ ತೊಯ್ದು ಹೋಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ಬೆಳೆಗಳು ಬಾಯಿಗೆ ಬರದಂತಾಗಿದ್ದು ಬೆಳೆಗಾರರು ಕಂಗಾಲಾಗಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g