ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಸಹಾಯಕ
1 min readಚಿಕ್ಕಮಗಳೂರು : ಹಕ್ಕು ಪತ್ರ ನೀಡಲು ಗ್ರಾಮಸ್ಥರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಸಹಾಯಕ ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.
ಕಡೂರು ತಾಲೂಕು ಕಛೇರಿಯಿಂದ ಗ್ರಾಮಸ್ಥರೊಬ್ಬರಿಗೆ ಹಕ್ಕು ಪತ್ರ ಕೊಡಿಸಲು 10 ಸಾವಿರ ರೂಪಾಯಿಗಳ ಲಂಚಕ್ಕೆ ಗ್ರಾಮ ಸಹಾಯಕ ಶಿವಣ್ಣ ಬೇಡಿಕೆ ಇಟ್ಟಿದ್ದಾನೆ. ಲಂಚದ ಹಣದಲ್ಲಿ 3 ಸಾವಿರ ರೂಪಾಯಿಗಳನ್ನು ಮುಂಗಡವಾಗಿ ಪಡೆದಿದ್ದ ಗ್ರಾಮ ಸಹಾಯಕ ಶಿವಣ್ಣ, ಉಳಿದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದಿದ್ದಾನೆ. ಉಳಿದ ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಗ್ರಾಮ ಸಹಾಯಕ ಶಿವಣ್ಣನನ್ನು ಆಧಾರ ಸಹಿತ ಹಿಡಿದಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g