May 14, 2024

MALNAD TV

HEART OF COFFEE CITY

ಸಿಗೋಡು ಬಳಿ ಮರಕ್ಕೆ ಕಾರು ಢಿಕ್ಕಿ, ಓರ್ವ ಮಹಿಳೆ ಸಾವು, 3 ಜನ ಗಂಭೀರ

1 min read

 

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಢಿಕ್ಕಿ ಹಿಡೆ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು ಮತ್ತಿಬ್ಬರಿಗೆ ಗಂಭೀರಗಾಯಗಳಾದ ಘಟನೆ ಬಾಳೆಹೊನ್ನೂರು ಸಮೀಪದ ಸಿಗೋಡು ಬಳಿ ನಡೆದಿದೆ.

ಬೆಂಗಳೂರಿನಿಂದ ಶೃಂಗೇರಿಗೆ ಬಂದಿದ್ದ ಪ್ರವಾಸಿ ತಂಡದ ಕಾರು ಶೃಂಗೇರಿಯಿಂದ ಹಿಂದಿರುಗುತ್ತಿದ್ದ ವೇಳೆ ಸೀಗೋಡು ಬಳಿ ಮರಕ್ಕೆ ಅಪ್ಪಳಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಅಪ್ಪಳಿಸಿದ್ದು ಬೆಂಗಳೂರು ಮೂಲದ ಗೀತಾ (28) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ 3 ಜನಕ್ಕೆ ಗಾಯವಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಡವಾಗಿ ಬಂದ ಅಂಬುಲೆನ್ಸ್: ಅಪಘಾತ ಸಂಭವಿಸಿ 1 ಗಂಟೆಯಾದರು ಆಂಬ್ಯುಲೆನ್ಸ್ ಸಿಗದೆ ತೀವ್ರ ಗಾಯಗೊಂಡಿದ್ದ ಮಹಿಳೆ ಸಾವು ಬದುಕಿನ ನಡುವೆ ಒದ್ದಾಡಿ ಸಾವನ್ನಪ್ಪಿದ್ದು ಸ್ಥಳೀಯವಾಗಿ ಹತ್ತಿರದ ಬಾಳೆಹೊನ್ನುರಿನಲ್ಲಿದ್ದ ಅಂಬುಲೆನ್ಸ್ ಕೆಟ್ಟು ನಿಂತ ಪರಿಣಾಮ ಬೇರೆಡೆಯಿಂದ ಅಂಬುಲೆನ್ಸ್ ಕರೆಸಿಕೊಳ್ಳುವುದು ತಡವಾದ ಕಾರಣ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!