ಬೈಕ್ ಲಾರಿ ನಡುವೆ ಭೀಕರ ಅಪಘಾತ ಮಹಿಳೆ ಸ್ಥಳದಲ್ಲಿ ಸಾವು
1 min readಚಿಕ್ಕಮಗಳೂರು : ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡೂರಿನ ತಂಗಲಿ ಬಳಿ ನಡೆದಿದೆ. ಪತ್ನಿ ಜೊತೆ ಕೆಲಸಕ್ಕೆ ತೆರಳಲು ಬೈಕ್ ನಲ್ಲಿ ಹೋಗುತ್ತಿದ್ದ ದಾವಣಗೆರೆ ಹೆಚ್ಚುವರಿ ಎಸ್ಪಿ ಗನ್ ಮ್ಯಾನ್ ಜಯಣ್ಣ ಸ್ಥಿತಿ ಗಂಭೀರವಾಗಿದೆ.
ಲಾರಿ-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಸುಮಾ ಎಂಬ 25 ವರ್ಷದ ಮಹಿಳೆ ಮೃತ ದುರ್ದೈವಿಯಾಗಿದ್ದು, ಕಡೂರು ತಾಲೂಕಿನ ತಂಗಲಿ ಬಳಿ ಈ ಅಪಘಾತ ನಡೆದಿದೆ, ಬೈಕ್ ಚಲಾಯಿಸುತ್ತಿದ್ದ ದಾವಣಗೆರೆ
ಎಎಸ್ಪಿ ಗನ್ ಮ್ಯಾನ್ ಸ್ಥಿತಿ ಗಂಭೀರವಾಗಿದೆ.
ಗನ್ ಮ್ಯಾನ್ ನನ್ನು ಜಯಣ್ಣ ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ತಂಗಲಿ ಮೂಲದ ಜಯಣ್ಣ, ಪತ್ನಿ ಜೊತೆ ಬೈಕಿನಲ್ಲಿ ರೈಲ್ವೆ ಸ್ಟೇಷನ್ ಗೆ ಹೋಗುವಾಗ ಅಪಘಾತ ನಡೆದಿದೆ. ಡ್ಯೂಟಿಗೆ ಹೋಗಲು ಪತ್ನಿ ಜೊತೆ ದಾವಣಗೆರೆಗೆ ಹೊರಟಿದ್ದರು ಎನ್ನಲಾಗಿದೆ. ಒನ್ ವೇ ನಲ್ಲಿ ಬಂದ ಲಾರಿ ಚಾಲಕನಿಂದ ಅಪಘಾತ ನಡೆದಿದೆ. ಪೇದೆ ಜಯಣ್ಣ ಸ್ಥಿತಿ ಗಂಭೀರವಾಗಿದ್ದು ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g