April 29, 2024

MALNAD TV

HEART OF COFFEE CITY

ಪಟಾಕಿ ಸಿಡಿದು ಓರ್ವ ಯುವಕ ಸಾವು, ಇಬ್ಬರಿಗೆ ಗಾಯ

1 min read

ಚಿಕ್ಕಮಗಳೂರು: ಪಟಾಕಿ ಸಿಡಿದು ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರದೀಪ್ (30) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಂಗಳವಾರ ರಾತ್ರಿ ಈ ಅವಘಡ ಸಂಭವಿಸಿದ್ದು, ಪಟಾಕಿ ಸಿಡಿದ ರಭಸಕ್ಕೆ ಮೃತ ಯುವಕ ಪ್ರದೀಪ್ ನೆಲದಿಂದ 5 ಅಡಿ ಎತ್ತರಕ್ಕೆ ಹಾರಿ ಬಿದ್ದಿದ್ದಾನೆ. ಚೇರ್ ಕೆಳಗೆ ಅಡಕೆ ಗೋಟು (ಕಲ್ಲು ಆಟಂಬಾಂಬ್) ಪಟಾಕಿ ಇಟ್ಟುಕೊಂಡು ಕೂತಿದ್ದ ಎಂಬುದಾಗಿ ತಿಳಿದು ಬಂದಿದೆ. ಪಟಾಕಿ ಕಿಡಿ ಸಿಡಿದು, ಚೀಲದಲ್ಲಿದ್ದ ಅಡಿಕೆಗೋಟು ಪಟಾಕಿ ಬ್ಲಾಸ್ಟ್ ಆಗಿ, ಮರ್ಮಾಂಗಕ್ಕೆ ಗಂಭೀರ ಪೆಟ್ಟು ಬಿದ್ದು, ಯುವಕ ಮೃತಪಟ್ಟಿದ್ದಾನೆ.

ಪ್ರದೀಪ್ ಜೊತೆಗಿದ್ದ ಮತ್ತೋರ್ವ ಯುವಕನಿಗೂ ಘಟನೆಯಲ್ಲಿ ಗಂಭೀರ ಗಾಯವಾಗಿದೆ, ಅಲ್ಲದೆ ಮೂವರು ಮಕ್ಕಳಿಗೂ ಗಾಯವಾಗಿದ್ದು, ಓರ್ವ ಗಾಯಾಳುವನ್ನು ಮೃತ ಪ್ರದೀಪನ ಅಣ್ಣನ ಮಗ 6ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಆತನ ಕಾಲಿಗೆ ತೀವ್ರ ಪೆಟ್ಟಾಗಿದ್ದು,‌ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪಟಾಕಿ ಸ್ಪೋಟದ ಅವಘಡ ಸಂಭವಿಸಿದೆ. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!