ಗಾಂಜಾ ಮತ್ತಿನಲ್ಲಿ ಲೋಡೆಡ್ ಗನ್ ಹಿಡಿದು ಯುವಕನ ಹುಚ್ಚಾಟ
1 min readಚಿಕ್ಕಮಗಳೂರು: ಗಾಂಜಾ ಮತ್ತಿನಲ್ಲಿ ಗನ್ ಹಿಡಿದು ತಿರುಗುತ್ತಿದ್ದ ಸಮೀರ್ ಎಂಬ ಯುವಕನನ್ನು ಚಿಕ್ಕಮಗಳೂರು ಜಿಲ್ಲೆ ಕಡೂರು ಪೊಲೀಸರು ಬಂಧಿಸಿದ್ದಾರೆ. ಕಡೂರಿನ ಎ.ಪಿ.ಎಂ.ಸಿ. ಮಾರುಕಟ್ಟೆ ಬಳಿ ಲೋಡೆಡ್ ಗನ್ ಹಿಡಿದು ಹುಚ್ಚಾಟ ಮೆರೆಯುತ್ತಿದ್ದ ಯುವಕನನ್ನ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಯು ಬೀರೂರು ಮೂಲದವನೆಂದು ವಿಚಾರಣೆ ವೇಳೆ ತಿಳಿದುಬಂದಿದೆ. ಸ್ಥಳೀಯರ ಸಹಾಯದಿಂದ ಯುವಕನನ್ನ ಬಂಧಿಸಲಾಗಿದೆ.
ಗಾಂಜಾ ಮತ್ತಿನಲ್ಲಿದ್ದ ಸಮೀರ್ ಎ.ಪಿ.ಎಂ.ಸಿ. ಮಾರುಕಟ್ಟೆ ಬಳಿ ಗನ್ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ, ಸಮೀರ್ ಬಳಿ ಒಂದು ಲೋಡೆಡ್ ಗನ್, 10 ಜೀವಂತ ಗುಂಡು, ಎರಡು ಚಾಕು, ಡ್ರ್ಯಾಗರ್ ಸೇರಿದಂತೆ 40 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಂಕಿತ ಆರೋಪಿ ಸಮೀರ್ ಸೆಕೆಂಡ್ ಹ್ಯಾಂಡ್ ಕಾರು,ಬೈಕ್ ವ್ಯಾಪಾರ ಮಾಡುತ್ತಿದ್ದ ಮತ್ತು ಅಕ್ರಮವಾಗಿ ಗನ್ ಖರೀದಿಸಿ ತನ್ನೊಂದಿಗೆ ಇಟ್ಟುಕೊಂಡಿದ್ದ ಎನ್ನಲಾಗಿದೆ. ಸಮೀರ್ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಡೂರು ಪೊಲೀಸರು ಸಮೀರ್ ನನ್ನ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g