ಅಪ್ರಾಪ್ತೆ ಅಪಹರಣ, ಮೂವರ ಸೆರೆ
1 min read
: ಮದುವೆ ಮಾಡಿಕೊಡುವುದಿಲ್ಲ ಎಂದಿದ್ದಕ್ಕೆ ಅಪ್ರಾಪ್ತೆಯನ್ನ ಸಿನಿಮಯ ರೀತಿ ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರಡಿಹಳ್ಳಿಲ್ಲಿ ನಡೆದಿದೆ. ಅಪಹರಣಕಾರರನ್ನ ಮರಡಿಹಳ್ಳಿಯ ಮಲ್ಲೇಶ್, ಎಸ್.ಜಿ.ಕೊಪ್ಪಲಿನ ಪರಮೇಶ್, ಕುರುಬಗೆರೆ ಮಹಾಂತೇಶ್ ಎಂದು ಗುರುತಿಸಲಾಗಿದ್ದು,
ಮೂವರು ಅಪಹರಣಕಾರರನ್ನ ಬಂಧಿಸುವಲ್ಲಿ ಕಡೂರು ಪೊಲೀಸರು ಯಶಸ್ವಿಯಾಗಿದ್ದು, ಅಪಹರಣಕ್ಕೊಳಗಾದ ಯುವತಿಯನ್ನ ಪೊಲೀಸರು ರಕ್ಷಿಸಿದ್ದಾರೆ. ಡಿಸೆಂಬರ್ 27ರ ಬೆಳಗಿನಜಾವ 4 ಗಂಟೆ ಸುಮಾರಿಗೆ ಮರಡಿಹಳ್ಳಿ ವಾಸಿ ಓಂಕಾರಪ್ಪ ಹಾಗೂ ಅವರ ಪತ್ನಿ ಅಮ್ಮಯ್ಯ ತಮ್ಮ 17 ವರ್ಷದ ಮಗಳೊಂದಿಗೆ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಕುಂಬಳಕಾಯಿ ಹೂವಿಗೆ ಪರಾಗಸ್ಪರ್ಶ ಮಾಡಲು ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮರಡಿಹಳ್ಳಿ ಮತ್ತು ಕಡೂರಹಳ್ಳಿಯ ಮುಖ್ಯ ರಸ್ತೆಯಲ್ಲಿ ಬೊಲೆರೋ ವಾಹನದಲ್ಲಿ ಹಿಂದಿನಿಂದ ಬಂದು ಓಂಕಾರಪ್ಪ ಮತ್ತು ಅಮ್ಮಯ್ಯ ಅವರಿಗೆ ವಾಹನದಲ್ಲಿದ್ದ ವ್ಯಕ್ತಿಗಳು ಥಳಿಸಿ ಅವರ ಮಗಳನ್ನ ಅಪಹರಿಸಿದ್ದರು. ವಾಹನದಲ್ಲಿ ಗೋವಿಂದಪ್ಪ, ಪರಮೇಶ್, ಸಣ್ಣೆಗೌಡ ಇದ್ದರೆಂದು ಓಂಕಾರಪ್ಪ ಗುರುತು ಹಿಡಿದಿದ್ದು ಈ ಅಪಹರಣ ಸಂದರ್ಭದಲ್ಲಿ ಅಲ್ಲೇ ಹೊಲದಲ್ಲಿ ಅಡಗಿ ಕುಳಿತಿದ್ದ ಮತ್ತೆ ಮೂರ್ನಾಲ್ಕು ಜನ ಅಪಹರಣಕಾರರೊಂದಿಗೆ ಕೈಜೋಡಿಸಿದ್ದಾರೆ. ನನಗೆ ಹಾಗೂ ನನ್ನ ಪತ್ನಿಯ ಕೈಕಾಲುಗಳಿಗೆ ತೀವ್ರ ಪೆಟ್ಟಾಗಿದೆ ಎಂದು ಹಲ್ಲೆಗೊಳಗಾದ ಓಂಕಾರಪ್ಪ ತಿಳಿಸಿದ್ದಾರೆ. ಈ ಘಟನೆಯಲ್ಲಿ ಗ್ರಾಮದ ಮಲ್ಲೇಶ್ ಹಾಗೂ ಮಾರುತಿ ಅವರ ಕೈವಾಡವಿದೆ ಎಂದು ಓಂಕಾರಪ್ಪ ದೂರಿನಲ್ಲಿ ವಿವರಿಸಿದ್ದಾರೆ.
ಓಂಕಾರಪ್ಪ ದೂರು ನೀಡಿದ ಕೂಡಲೇ ಕಾರ್ಯಪ್ರವೃತ್ತರಾದ ಕಡೂರು ಪೆÇಲೀಸರು ಬಂಧಿತ ಆರೋಪಿ ಮಹಾಂತೇಶ್ ಸಂಬಂಧಿ ಕಡೂರು ತಾಲೂಕಿನ ಎಮ್ಮೆದೊಡ್ಡಿ ಭಾಗದ ಸಗಣಿಬಸವನಹಳ್ಳಿ ಗ್ರಾಮದ ಗುರುಸ್ವಾಮಿ ಎಂಬುವರ ಮನೆಯಲ್ಲಿ ಯುವತಿಯನ್ನು ಪತ್ತೆ ಮಾಡಿದ್ದಾರೆ. ಅಪಹರಣಕ್ಕೊಳಗಾದ ಯುವತಿಯನ್ನ ರಕ್ಷಿಸಿರೋ ಪೊಲೀಸರು ಯುವತಿಯನ್ನ ವೈದೈಕೀಯ ಪರೀಕ್ಷೆಗೊಳಪಡಿಸಿದ ಬಳಿಕ ಪೋಷಕರಿಗೆ ಒಪ್ಪಿಸಲಾಗಿದೆ. ಬಂಧಿತರಲ್ಲಿ ಓರ್ವನಾದ ಪರಮೇಶ್ ಕೆಲವು ತಿಂಗಳ ಹಿಂದೆ ಯುವತಿಯನ್ನ ಮದುವೆ ಮಾಡಿಕೊಡಿ ಎಂದು ಯುವತಿಯ ತಂದೆ ಓಂಕಾರಪ್ಪನವರಿಗೆ ಪ್ರಸ್ತಾಪಿದ್ದರು. ಆದರೆ, ಓಂಕಾರಪ್ಪ ಪರಮೇಶ್ ಅವರ ಆಹ್ವಾನವನ್ನ ತಿರಸ್ಕರಿಸಿದ್ದರಿಂದ ಮನನೊಂದ ಪರಮೇಶ್ ಯುವತಿಯನ್ನ ಅಪಹರಿಸಲಾಗಿದೆ ಎಂಬ ಅಂಶ ಪೆÇಲೀಸರ ಪ್ರಾಥಮಿಕ ತನಿಖೆಯಿಂದ ಹೊರಬಂದಿದೆ. ಆರೋಪಿಗಳನ್ನ ಬಂಧಿಸಿರೋ ಕಡೂರು ಪೊಲೀಸರು ಆರೋಪಿಗಳನ್ನ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g