ಪೊಲೀಸರ ಗುಂಡೇಟಿಂದ ಗಾಯಗೊಂಡಿದ್ದ ಆರೋಪಿ ಆಸ್ಪತ್ರೆಯಿಂದ ಎಸ್ಕೇಪ್..!
1 min readಚಿಕ್ಕಮಗಳೂರು: ಪ್ರಕರಣ ಒಂದರಲ್ಲಿ ಪೊಲೀಸರಿಂದ ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯೊಬ್ಬ ಪೊಲೀಸರ ಕಣ್ ತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.
ಒಂದು ತಿಂಗಳಿಂದ ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೂರ್ಣೇಶ್ ಬೆಳಗಿನ ಜಾವ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಎಸ್ಕೇಪ್ ಆಗಿರುವ ಪೂರ್ಣೇಶ್ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದವನು. ಈತ ಒಂದು ರೀತಿ ಖಾಂಡ್ಯದ ರೌಡಿ. ಈತನ ಮೇಲೆ 4 ಹಾಫ್ ಮರ್ಡರ್, 3 ಅಸಾಲ್ಟ್, ಪೊಲೀಸ್ ಮೇಲೆ ಅಟ್ಯಾಕ್ ಸೇರಿದಂತೆ 9 ಕೇಸ್ಗಳಿವೆ. 307 ಕೇಸಲ್ಲಿ ವಾರಂಟ್ ಕೂಡ ಇಶ್ಯು ಆಗಿತ್ತು. ಆದ್ರೆ, 2012ರಿಂದ ಕಾಡಲ್ಲಿ, ಕಾಡಿನ ಮರಗಳ ಮೇಲೆ ಮಲಗಿ ಪೊಲೀಸರ ಕೈಗೆ ಸಿಗದೆ ಆಟ ಆಡಿಸ್ತಿದ್ದ. ಕಳೆದ ನವೆಂಬರ್ ನಲ್ಲಿ ಮನೆಯಲ್ಲಿರೋ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ಪೊಲೀಸರ ಮೇಲೆ ಲಾಂಗ್ ಬೀಸಿದ ಅಂತ ಕಾಲಿಗೆ ಮಂಡಿಗೆ ಫೈರಿಂಗ್ ಮಾಡಿದ್ದರು. ಫೈರಿಂಗ್ ವೇಳೆ ಪೂರ್ಣೇಶ್ ಬಲಗಾಲಿಗೆ ಗುಂಡು ತಗಲಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವನು ಆಸ್ಪತ್ರೆಯಿಂದ ಮುಂಜಾನೆ ಎಸ್ಕೇಪ್ ಆಗಿದ್ದಾನೆ. ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g