ಕಾರ್ಮಿಕ ಮಹಿಳೆ ಮೇಲೆ ಹಲ್ಲೆ ಆರೋಪ, ಮಹಿಳೆಗೆ ಗರ್ಭಪಾತ…?
1 min read
ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಮೇಲೆ ತೋಟದ ಮಾಲೀಕ ಹಲ್ಲೆ ಮಾಡಿದ್ದಾರೆ. ಇದರಿಂದ ಎರಡು ತಿಂಗಳ ಗರ್ಭೀಣಿಗೆ ಗರ್ಭಪಾತವಾಗಿದೆ ಎಂದು ಕೂಲಿ ಕಾರ್ಮಿಕರು ತೋಟದ ಮಾಲೀಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ಜಗದೀಶ್ ಎಂಬುವರ ತೋಟದಲ್ಲಿ ಆರೇಳೆ ಕುಟುಂಬಗಳು ಕೂಲಿ ಮಾಡಿಕೊಂಡು ಬದುಕುತ್ತಿವೆ. ಆದರೆ, ತೋಟದ ಲೈನ್ ಮನೆಗಳಲ್ಲಿ ಮಕ್ಕಳ ಚಿಕ್ಕಮಕ್ಕಳ ಜಗಳ ದೊಡ್ಡವರ ಮುಟ್ಟಿ ಮಾಲೀಕರ ಬಳಿಯೂ ಹೋಗಿತ್ತು. ಆಗ ಮಾಲೀಕರು ಏಕಾಏಕಿ ಬಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಹಲ್ಲೆ ಮಾಡಿದ್ದಷ್ಟೆ ಅಲ್ಲದೆ 14 ಕಾರ್ಮಿಕರನ್ನೂ ಒಂದು ದಿನವಿಡೀ ತೋಟದ ಮನೆಯಲ್ಲಿ ಕೂಡಿಹಾಕಿದ್ದಾರೆಂದು ನೊಂದ ಕಾರ್ಮಿಕರು ಆರೋಪಿಸಿದ್ದಾರೆ.
ತೋಟದ ಮಾಲೀಕರ ಹಲ್ಲೆ ವೇಳೆ ಎರಡು ತಿಂಗಳ ಗರ್ಭೀಣಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿದ್ದಾರೆ. ಇದೀಗ, ಗರ್ಭಪಾತವಾದ ಅರ್ಪಿತಾ ಪತಿ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಗಿದ್ದು ಸೆಕ್ಷನ್ 504, 323, 342 ಹಾಗೂ ಎಸ್.ಎಸ್ಸಿ, ಎಸ್ಟಿ ಕಾಯ್ದೆಯಡಿ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g