ಆಸಿಡ್ ದಾಳಿ ಪ್ರಕರಣ : ನಾಲ್ವರಿಗೆ ವಿರುದ್ಧ ಜುಲೈ15 ರಂದು ಶಿಕ್ಷೆ ಪ್ರಕಟ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದ್ದ ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಆರೋಪ ಸಾಭೀತಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದಲ್ಲಿ 2015, ಏಪ್ರಿಲ್ 18ರಂದು ಯುವತಿ ಮೇಲೆ ಆಸಿಡ್ ಹಾಕಲಾಗಿತ್ತು.ಈ ಸಂಬಂಧ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ತೀರ್ಪು ಹೊರಬಂದಿದ್ದು.ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬ ನಾಲ್ಕು ಜನ ಆರೋಪಿಗಳ ವಿರುದ್ಧ ಸಾಭೀತಾಗಿದೆ.ಗಣೇಶ ಎಂಬಾತ ಯುವತಿಯನ್ನ
ಪ್ರೀತಿಸುವಂತೆ ಪೀಡಿಸುತ್ತಿದ್ದ ಇದಕ್ಕೆ ಒಪ್ಪದ ಹಿನ್ನೆಲೆ ಆಸಿಡ್ ದಾಳಿ ನಡೆಸಿದ್ದಾನೆ ಎಂದು ಸಾಬೀತಾಗಿದೆ
ಕಳೆದ ಆರು ವರ್ಷಗಳಿಂದ ವಿಚಾರಣೆಯಲ್ಲಿ ಇದ್ದ ಪ್ರಕರಣದ ಇಂದು ವಿಚಾರಣೆ ಅಂತ್ಯಗೊಂಡಿದೆ. 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಶಿಕ್ಷೆ ಪ್ರಮಾಣ ಜುಲೈ 15 ರಂದು ಶಿಕ್ಷೆ ಪ್ರಕಟಗೊಳ್ಳಲಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g