15 ದಿನದ ಬಳಿಕ ಮಲೆನಾಡಲ್ಲಿ ಮಳೆ ಅಬ್ಬರ, ಜನಜೀವನ ಅಸ್ತವ್ಯಸ್ತ
1 min read
ಚಿಕ್ಕಮಗಳೂರು. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 15 ದಿನಗಳಿಂದ ಬಿಡುವು ನೀಡಿದ್ದ ವರುಣದೇವ ಇಂದು ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಜಿಲ್ಲೆಯ ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು, ಮೇಗುಂದಾ ಸುತ್ತಮುತ್ತ, ಕೊಪ್ಪ ತಾಲೂಕಿನ ಜಯಪುರ ಸುತ್ತಮುತ್ತ ಸುಮಾರು ಒಂದು ಗಂಟೆಗಳ ಕಾಲ ಭಾರೀ ಮಳೆ ಸುರಿದಿದೆ. ದಿಢೀರನೆ ಆರಂಭವಾದ ಮಳೆಯಿಂದ ಜನಜೀವನ ಕೂಡ ಅಸ್ತವ್ಯಸ್ತಗೊಂಡಿದೆ. ಸುಮಾರ ಒಂದು ಗಂಟೆಗಳ ಕಾಲ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನದಿಯಂತೆ ಹರಿದಿದೆ. ರಸ್ತೆಯಲ್ಲಿ ನೀರು ಹರಿದ ಪರಿಣಾಮ ಜನ ಓಡಾಡೋದಕ್ಕೂ ಸಾಧ್ಯವಾಗದಂತ ಸ್ಥಿತಿ ನಿರ್ಮಾಣವಾಗಿದೆ.
ಕೆಲ ತಗ್ಗು ಪ್ರದೇಶದಲ್ಲಿ ಮನೆ ಮುಂದೆ ನೀರು ನಿಂತಿದ್ದು ಜನ ಮನೆಯಿಂದ ಹೊರಬರದಂತಹಾ ಸ್ಥಿತಿ ನಿರ್ಮಾಣವಾಗಿತ್ತು. ಇದ್ದಕ್ಕಿದ್ದಂತೆ ಆರಂಭವಾದ ಮಳೆಯಿಂದ ಗ್ರಾಮೀಣ ಭಾಗದ ಜನ ಹೈರಾಣಾಗಿದ್ದಾರೆ. ಮಳೆ ಜೊತೆ ಗಾಳಿಯೂ ಹೆಚ್ಚಿದ್ದ ಪರಿಣಾಮ ಮೆಸ್ಕಾಂ ಮುಂಜಾಗೃತ ಕ್ರಮವಾಗಿ ಗ್ರಾಮೀಣ ಭಾಗಕ್ಕೆ ವಿದ್ಯುತ್ ಸಂಪರ್ಕವನ್ನ ಕಡಿತಗೊಳಿಸಿತ್ತು. ಭಾರಿ ಮಳೆಯಿಂದ ಕಾಫಿತೋಟದೊಳಗೆ ಮಳೆ ನೀರು ನದಿಯಂತೆ ಉಕ್ಕಿ ಹರಿದಿದೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆ ತಕ್ಷಣ ಸಂಪೂರ್ಣವಾಗಿ ನಿಂತಿದ್ದು, ಜನಜೀವನ ಯಥಾಸ್ಥಿತಿಗೆ ಬಂದಿದೆ. ಆದರೆ, ಜಿಲ್ಲೆಯ ಮಲೆನಾಡು ಭಾಗ ಮಳೆ ಕೊರತೆಯನ್ನ ಎದುರಿಸುತ್ತಿದ್ದು, ಮಳೆ ಬರಲಿ ಎಂದು ಮಲೆನಾಡಿಗರು ವರುಣದೇವನಲ್ಲಿ ಪ್ರಾರ್ಥಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g