May 6, 2024

MALNAD TV

HEART OF COFFEE CITY

ಹಲವು ವರ್ಷಗಳ ಬಳಿಕ ದತ್ತಪೀಠಕ್ಕೆ ತೆರಳಿ ‘ಹುಣ್ಣಿಮೆ ಪೂಜೆ’ ನೆರವೇರಿಸಿದ ಬಿಜೆಪಿ ಕಾರ್ಯಕರ್ತರು

1 min read

ಚಿಕ್ಕಮಗಳೂರು: ವಿವಾದಿತ ದತ್ತಪೀಠಕ್ಕೆ ಹಲವು ವರ್ಷಗಳ ಬಳಿಕ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಹುಣ್ಣಿಮೆ ಪೂಜೆ ನೆರವೇರಿಸಲು ತೆರಳಿದರು.
ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದತ್ತಪೀಠಕ್ಕೆ ವರ್ಷಗಳ ಬಳಿಕ ಮೊದಲ ಬಾರಿಗೆ ಹುಣ್ಣಿಮೆ ಪೂಜೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಮೊದಲು ದತ್ತ ಪಾದುಕೆ ದರ್ಶನ ಮಾಡಿ ನಂತರ ಪೂಜೆ ಸಲ್ಲಿಸಲಿದ್ದಾರೆ. ಪ್ರತಿ ಹುಣ್ಣುಮೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ನಿಂದ ಪೂಜೆ ನಡೆಯುತಿತ್ತು ಆದರೆ ಇದೀಗ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ ನಡೆಯಲಿದೆ.
ಕರ್ನಾಟಕದ ಅಯೋಧ್ಯೆ ಎಂದೇ ಬಿಂಬಿತವಾಗಿರುವ ದತ್ತಪೀಠವು ಹಿಂದೂಪೀಠದ ಜೊತೆ ರಾಜಕೀಯವಾಗಿಯು ಚರ್ಚೆಯಲ್ಲಿದೆ. ಕಾಫಿನಾಡಲ್ಲಿ ಡಿಸೆಂಬರ್ 17 ರಿಂದ ದತ್ತ ಜಯಂತಿಯು ಆರಂಭವಾಗಲಿದೆ. ಈ ಸಂದರ್ಭದಲ್ಲಿ ಬೈಕ್ ಜಾಥಾದ ಮೂಲಕ ದತ್ತಪೀಠಕ್ಕೆ ಬಿಜೆಪಿ ಕಾರ್ಯಕರ್ತರು ತೆರಳಿ ಪೂಜೆ ಮಾಡಲಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!