ವ್ಯಾಕ್ಸಿನ್ ವಿರುದ್ದ ವಿರೋಧ ಪಕ್ಷದವರ ಅಪಪ್ರಚಾರದಿಂದ ಜನ ಸಾಯುವಂತಾಗಿದೆ: ಸಿ.ಟಿ. ರವಿ
1 min readಚಿಕ್ಕಮಗಳೂರು : ಬಿಜೆಪಿ ವ್ಯಾಕ್ಸಿನ್, ಜೀವ ತೆಗೆಯುವುದಕ್ಕೆ ಮಾಡಿದ್ದಾರೆ, ಈ ವ್ಯಾಕ್ಸಿನ್ ತಗೊಂಡ್ರೆ ಮಕ್ಕಳಾಗಲ್ಲ ಅಂತಾ ಅಪಪ್ರಚಾರ ಮಾಡಿದ್ರು, ಆಮೇಲೆ ಅವರೇ ಕದ್ದು ಹೋಗಿ ವ್ಯಾಕ್ಸಿನ್ ತಗೊಂಡ್ರು, ಆದರೆ ಜನರು ಸಾಯುತ್ತಿದ್ದಾರೆ, ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ ರವಿ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ವ್ಯಾಕ್ಸಿನ್ ಕುರಿತು ರಾಜಕೀಯ ಅಪಪ್ರಚಾರ ಮಾಡಿದ್ರು, ಈಗ ವ್ಯಾಕ್ಸಿನ್ ಗೆ ಬೇಡಿಕೆಯಿದೆ, ಈ ಹಿಂದೆ ಟಾರ್ಗೆಟ್ ರೀಚ್ ಆಗ್ತಿರಲಿಲ್ಲ, ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ಉಪಯೋಗಿಸಿಕೊಳ್ಳದೇ ವೇಸ್ಟ್ ಆಗಿದೆ, ಇದಕ್ಕೆಲ್ಲ ರಾಜಕೀಯ ಮುಖಂಡರು ಹುಟ್ಟುಹಾಕಿದ್ದ ಅನುಮಾನವೇ ಕಾರಣವಾಗಿದೆ. ಈಗ ಲಸಿಕೆಗೆ ಎಲ್ಲೆಡೆ ಅಭಾವ ಸೃಷ್ಟಿಯಾಗಿದೆ, ಇದರ ಹೊಣೆಯನ್ನು ಎಲ್ಲರೂ ಹೊತ್ತುಕೊಳ್ಳಬೇಕು ಎಂದು ಹೇಳಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g