ಅಲ್ಲಂಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ
1 min readಚಿಕ್ಕಮಗಳೂರು-ಅಲ್ಲಂಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಪದ್ಮಾಕ್ಷಿ.ಜೆ.ಡಿ.ಮಹೇಶ್ ಉಪಾಧ್ಯಕ್ಷರಾಗಿ ಕೃಷ್ಣ ಇಂದು ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು.ಬಿಜೆಪಿ ಜಿಲ್ಲಾ ವಕ್ತಾರ ಟಿ.ರಾಜಶೇಖರ್ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ಅಲ್ಲಂಪುರ ಗ್ರಾಮಪಂಚಾಯಿತಿಯ ಸದಸ್ಯರು ಹಾಗೂ ಅಧಿಕಾರಿ ವರ್ಗವನ್ನು ವಿಶ್ವಾಸಕ್ಕೆ ಪಡೆದು ಹೆಚ್ಚಿನ ಅನುದಾನ ತಂದು ಸರ್ಕಾರದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಾದರಿ ಪಂಚಾಯಿತಿಯನ್ನಾಗಿಸುವಲ್ಲಿ ಶ್ರಮಿಸಲಿ ಎಂದು ಸಲಹೆ ನೀಡಿದರು.ಈ ಹಿಂದೆ ಆಯ್ಕೆಗೊಂಡ 12 ಸದಸ್ಯರು ಭಾರತೀಯ ಜನತಾ ಪಾರ್ಟಿ ಸದಸ್ಯರೆ ಆಗಿದ್ದು, ಎಲ್ಲರು ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಬೇಕು, ಯಾವುದೇ ರೀತಿಯ ರಾಜಕೀಯ ಮಾಡದೆ ಊರಿನ ಹಿತ ದೃಷ್ಟಿಯನ್ನಿಟ್ಟುಕೊಂಡು ಅಲ್ಲಂಪುರ ಗ್ರಾಮ ಪಂಚಾಯಿತಿಯನ್ನು ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಬೇಕು ಇದಕ್ಕೆ ಬೇಕಾದ ಸಲಹೆ ಸಹಕಾರವನ್ನು ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಡಿ.ಲೋಕೇಶ್ ಮಾತನಾಡಿ ಗ್ರಾಮ ಪಂಚಾಯಿತಿ ಯಿಂದ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೆಚ್ಚು ಗಮನ ಹರಿಸಿ ಕೆಲಸ ಮಾಡಬೇಕೆಂದು ತಿಳಿಸಿದರು.ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಎಲ್ಲರ ಸಹಕಾರದೊಂದಿಗೆ ಕಾರ್ಯಗತ ಮಾಡಬೇಕು, ಮುಖ್ಯವಾಗಿ ಗ್ರಾಮಗಳಲ್ಲಿನ ಕುಡಿಯುವ ನೀರು, ಬೀದಿ ದೀಪ ಸಮಸ್ಯೆ, ಸ್ವಚ್ಚತೆಗೆ ಆಧ್ಯತೆ ನೀಡಿ ಎಲ್ಲಾ ಸದಸ್ಯರು ಅಪಾರ ನಂಬಿಕೆ, ವಿಶ್ವಾಸದೊಂದಿಗೆ ಅಲ್ಲಂಪುರ ಪಂಚಾಯಿತಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು ಜವಾಬ್ದಾರಿ ಹೆಚ್ಚಿಸಿದೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಅಲ್ಲಂಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಪದ್ಮಾಕ್ಷಿ.ಜೆ.ಡಿ.ಮಹೇಶ್ ಮಾತನಾಡಿ ನೂತನ ಅಧ್ಯಕ್ಷರ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಧನ್ಯವಾದಗಳು ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದರು.
ಅಲ್ಲಂಪುರ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷ ಕೃಷ್ಣ ಮಾತನಾಡಿ ಭಾರತೀಯ ಜನತಾ ಪಾರ್ಟಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೂ ಧನ್ಯವಾದಗಳನ್ನು ತಿಳಿಸಿದ ಅವರು ಮುಂದಿನ ದಿನಗಳಲ್ಲಿ ಅಧ್ಯಕ್ಷರು ಮತ್ತು ಸದಸ್ಯರುಗಳೆಲ್ಲರು ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕನಕರಾಜ್ ಅರಸ್, ಪಾಪಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಣ್ಣ, ಸುರೇಶ್, ಹಿರೇಕೊಳಲೆ ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ್, ದಾಸರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ದೀಪಕ್, ಕೆ.ಪಿ.ವೆಂಕಟೇಶ್. ಗ್ರಾಪಂ ಸದಸ್ಯರುಗಳಾದ ಮಾಜಿ ಅಧ್ಯಕ್ಷರುಗಳಾದ ಎ.ಟಿ.ರಮೇಶ್, ದಾನೇಶ್, ವಸಂತ್ಕುಮಾರ್, ಗಾಯಿತ್ರಿದ್ರುವೀಶ್, ಅರ್ಪಿತಾ, ಎಂ.ಪ್ರಸನ್ನ, ಸದಸ್ಯರಾದ ಮಧುಸೂದನ್ ರಾವ್, ಕಮಲಸೋಮಶೇಖರ್, ಜಯಂತಿ, ಶಿವರಾಜ್, ಶಿಲ್ಪಾ, ಪೂರ್ಣಿಮಾ, ಪಿಡಿಓ ಮಂಜುನಾಥ್, ಮತ್ತು ಗ್ರಾಮಸ್ಥರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g